Advertisement

ಮಂಗಳೂರು ಜ್ಯುವೆಲ್ಲರಿಯಲ್ಲಿ ಕೊಲೆ ಪ್ರಕರಣ: ಆಟೋರಿಕ್ಷಾದ ಚಾಲಕನ ವಿಚಾರಣೆ

12:17 AM Feb 06, 2023 | Team Udayavani |

ಮಂಗಳೂರು: ನಗರದ ಹಂಪನ ಕಟ್ಟೆಯ ಜುವೆಲರಿ ಅಂಗಡಿ ಯಲ್ಲಿ ಕಳೆದ ಶುಕ್ರವಾರ ನಡೆದ ಕೊಲೆ, ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದು, ಆರೋಪಿ ಪರಾರಿಯಾದ ಆಟೋ ರಿಕ್ಷಾ ಚಾಲಕನನ್ನು ವಿಚಾರಣೆ ಗೊಳಪಡಿಸಿದ್ದಾರೆ.

Advertisement

ಅಂಗಡಿಯ ಸಿಬಂದಿ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದಿದ್ದ ಆರೋಪಿ ಅನಂತರ ಸ್ವಲ್ಪ ದೂರಕ್ಕೆ ಓಡಿ ಹೋಗಿ ಆಟೋರಿಕ್ಷಾವೊಂದರಲ್ಲಿ ಹೋಗಿದ್ದು ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿತ್ತು. ಆರೋಪಿ ಯಾವ ಕಡೆ ಹೋಗಿದ್ದ ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next