Advertisement

ಮಂಗಳೂರಿನ ಚಿನ್ನಾಭರಣ ಮಳಿಗೆಯಲ್ಲಿ ಕೊಲೆ: ಶಂಕಿತನ ಇನ್ನಷ್ಟು ಚಿತ್ರಗಳ ಬಿಡುಗಡೆ

08:00 PM Feb 10, 2023 | Team Udayavani |

ಮಂಗಳೂರು : ನಗರದ ಹಂಪನಕಟ್ಟೆಯಲ್ಲಿರುವ ಆಭರಣ ಮಳಿಗೆಯಲ್ಲಿ ನೌಕರನನ್ನು ಇರಿದು ಕೊಂದ ದುಷ್ಕರ್ಮಿಯ ಇನ್ನಷ್ಟು ಚಿತ್ರಗಳನ್ನು ಪೊಲೀಸರು ಫೆ.10, ಶುಕ್ರವಾರ ಬಿಡುಗಡೆ ಮಾಡಿದ್ದಾರೆ.

Advertisement

“ ಚಿನ್ನ ಖರೀದಿಸುವವರ ಸೋಗಿನಲ್ಲಿ ಬಂದು ಆಭರಣ ಅಂಗಡಿಯೊಳಗಿನ ಸಿಬಂದಿ ರಾಘವೇಂದ್ರ ಆಚಾರ್ ಅವರನ್ನು ಇರಿದು ಕೊಲೆ ಮಾಡಿದ್ದಾರೆ. ವ್ಯಕ್ತಿಯ ಭಾವಚಿತ್ರವು ಸಿಸಿಟಿವಿಗಳಲ್ಲಿ ದಾಖಲಾಗಿರುವ ಚಿತ್ರಗಳಲ್ಲಿ ಕಂಡುಬಂದಿದ್ದು, ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಲ್ಲಿ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಅಧಿಕಾರಿಗಳ ಮೊಬೈಲ್ ಫೋನ್ ಸಂಖ್ಯೆಗೆ ಮಾಹಿತಿಯನ್ನು ನೀಡುವಂತೆ ಕೋರಲಾಗಿದೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು’ ಎಂದು ನಗರ ಪೊಲೀಸರು ತಿಳಿಸಿದ್ದಾರೆ.

ಮಾಹಿತಿದಾರರು ಈ ಕೆಳಗಿನ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ:
ಎಸಿಪಿ ಸಿಸಿಬಿ, ಮಂಗಳೂರು ನಗರ – ಪಿ ಎ ಹೆಗ್ಡೆ (9945054333)
ಎಸಿಪಿ ಕೇಂದ್ರ ಉಪ ವಿಭಾಗ, ಮಂಗಳೂರು ನಗರ, ಮಹೇಶ್ ಕುಮಾರ್ – (9480805320)

ಹಂಪನಕಟ್ಟೆ ಮಿಲಾಗ್ರಿಸ್ ಬಳಿ ಫೆ.3ರಂದು ಚಿನ್ನಾಭರಣ ಅಂಗಡಿಯಲ್ಲಿ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ (55) ಅಪರಿಚಿತ ದುಷ್ಕರ್ಮಿ ಇರಿದ ಪರಿಣಾಮ ಮೃತಪಟ್ಟಿದ್ದರು. ಘಟನೆ ನಡೆದಾಗ ಅಂಗಡಿಯಲ್ಲಿ ಅವರೊಬ್ಬರೇ ಇದ್ದರು.

Advertisement

ಮುಸುಕುಧಾರಿಯೊಬ್ಬ ಅಂಗಡಿಯಿಂದ ಹೊರ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮಧ್ಯಾಹ್ನದ ಊಟ ಮುಗಿಸಿ ಅಂಗಡಿಗೆ ಹಿಂತಿರುಗಿದಾಗ ಅಂಗಡಿ ಮಾಲಕರು ಘಟನೆ ಬಗ್ಗೆ ತಿಳಿದುಕೊಂಡಿದ್ದರು.ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next