Advertisement

Legislative Council By-election: ಕಿಶೋರ್‌ ಕುಮಾರ್‌, ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

07:42 PM Oct 03, 2024 | Team Udayavani |

ಮಂಗಳೂರು: ವಿಧಾನ ಪರಿಷತ್‌ಗೆ ದ.ಕ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಉಮೇದುವಾರಿಕೆ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಬಿಜೆಪಿ, ಕಾಂಗ್ರೆಸ್‌ ಹಾಗೂ ಎಸ್‌ಡಿಪಿಐ ಅಭ್ಯರ್ಥಿಗಳ ಸಹಿತ ನಾಲ್ವರು ನಾಮಪತ್ರ ಸಲ್ಲಿಸಿದ್ದಾರೆ.

Advertisement

ಬಿಜೆಪಿ ಅಭ್ಯರ್ಥಿ ಕಿಶೋರ್‌ ಕುಮಾರ್‌ ಪುತ್ತೂರು, ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ, ಎಸ್‌ಡಿಪಿಐ ಅಭ್ಯರ್ಥಿಯಾಗಿ ಅನ್ವರ್‌ ಸಾದತ್‌, ಪಕ್ಷೇತರ ಅಭ್ಯರ್ಥಿಯಾಗಿ ಮೊಹಮ್ಮದ್‌ ರಿಯಾಝ್ ಅವರು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್‌ ಅವರಿಗೆ ನಾಮಪತ್ರ ಸಲ್ಲಿಸಿದರು.

 

ಈಗಾಗಲೇ ಪಕ್ಷೇತರ ಅಭ್ಯರ್ಥಿಯಾಗಿ ದಿನಕರ ಉಳ್ಳಾಲ ನಾಮಪತ್ರ ಸಲ್ಲಿಸಿದ್ದು, ಒಟ್ಟು ಐವರು ನಾಮಪತ್ರ ಸಲ್ಲಿಸಿದಂತಾಗಿದೆ.
ಕಿಶೋರ್‌ ಕುಮಾರ್‌ ಪುತ್ತೂರು ಹಾಗೂ ರಾಜು ಪುಜಾರಿ ತಲಾ 2 ಸೆಟ್‌ ನಾಮಪತ್ರ ಸಲ್ಲಿಸಿದರು.

ಕಿಶೋರ್‌ ಕುಮಾರ್‌ ನಾಮಪತ್ರ ಸಲ್ಲಿಕೆ ವೇಳೆ ಸಂಸದ ಕ್ಯಾ| ಬ್ರಿಜೇಶ್‌ ಚೌಟ, ಶಾಸಕರಾದ ಭಾಗೀರಥಿ ಮುರುಳ್ಯ, ಪ್ರತಾಪ್‌ಸಿಂಹ ನಾಯಕ್‌, ಯಶಪಾಲ್‌ ಸುವರ್ಣ, ಪ್ರಮುಖರಾದ ಸತೀಶ್‌ ಕುಂಪಲ, ಕಿಶೋರ್‌ ಕುಂದಾಪುರ, ಪ್ರಮೋದ್‌ ಮಧ್ವರಾಜ್‌ ಉಪಸ್ಥಿತರಿದ್ದರು.

Advertisement

ರಾಜು ಪೂಜಾರಿ ಜತೆಗೆ ರಮಾನಾಥ ರೈ, ಜಯಪ್ರಕಾಶ್‌ ಹೆಗ್ಡೆ, ಮಂಜುನಾಥ ಭಂಡಾರಿ, ಐವನ್‌ ಡಿ’ಸೋಜಾ ಅವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next