Advertisement

Mangaluru ಕೂಳೂರು ಹಳೆ ಸೇತುವೆ ದುರಸ್ತಿ; ಆ. 19ರಿಂದ ಘನ ವಾಹನ ಸಂಚಾರ ನಿರ್ಬಂಧ

12:27 AM Aug 16, 2024 | Team Udayavani |

ಮಂಗಳೂರು: ಮಂಗಳೂರು – ಉಡುಪಿ ಸಂಪರ್ಕದ ಕೂಳೂರು ಹಳೆಯ ಕಮಾನು ಸೇತುವೆಯ ದುರಸ್ತಿ ಹಿನ್ನೆಲೆಯಲ್ಲಿ ಹಗಲು ವೇಳೆಯಲ್ಲಿ ಘನ ವಾಹನಗಳ ಸಂಚಾರವನ್ನು 3 ದಿನಗಳ ಕಾಲ ನಿರ್ಬಂಧಿಸಲು ದ.ಕ. ಜಿಲ್ಲಾಡಳಿತ ನಿರ್ಧರಿಸಿದೆ.

Advertisement

ಆ. 19, 20 ಹಾಗೂ 21ರಂದು ಘನ ವಾಹನಗಳು ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಹಾಗೂ ಬೆಳಗ್ಗೆ 11ರಿಂದ ಅಪರಾಹ್ನ 3ರ ವರೆಗೆ ಮಾತ್ರ ಪಕ್ಕದಲ್ಲಿರುವ ಹೊಸ ಸೇತುವೆಯಲ್ಲಿ ಸಂಚರಿಸಬಹುದು. ಈ ಅವಧಿಯಲ್ಲಿ ಹೊಸ ಸೇತುವೆಯನ್ನು ಘನ ವಾಹನಗಳ ದ್ವಿಮುಖ ಸಂಚಾರಕ್ಕೆ ಬಳಸಲಾಗುತ್ತದೆ.

ಈ ದಿನಗಳಲ್ಲಿ ಬೆಳಗ್ಗೆ 6ರಿಂದ 11ರ ವರೆಗೆ ಹಾಗೂ ಅಪರಾಹ್ನ 3ರಿಂದ ರಾತ್ರಿ 10 ಗಂಟೆಯವರೆಗೆ ಉಡುಪಿಯಿಂದ ಕೇರಳ ಕಡೆಗೆ ಸಂಚರಿಸುವ ಘನ ವಾಹನಗಳು ಮೂಲ್ಕಿ- ಸುರತ್ಕಲ್‌- ಎಂಆರ್‌ಪಿಎಲ್‌, ಬಜ್ಪೆ, ಕೆಪಿಟಿ, ನಂತೂರು ಮಾರ್ಗವಾಗಿ ಸಾಗಬಹುದು.

ಈ ಪ್ರಾಯೋಗಿಕ ಸಂಚಾರ ನಡೆಸಿದ ಅನಂತರ ಅಗತ್ಯ ಮಾರ್ಪಾ ಡುಗಳಿದ್ದಲ್ಲಿ ಈ ನಿರ್ಬಂಧವನ್ನು ಆ. 25ರಿಂದ ಮುಂದಿನ ತಿಂಗಳು ಅ. 25ರ ವರೆಗೆ ವಿಸ್ತರಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next