Advertisement

Mangaluru: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆ

10:08 AM Sep 15, 2024 | Team Udayavani |

ಮಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ದ.ಕ ಜಿಲ್ಲೆಯ ಮೂಲ್ಕಿ ಹೆಜಮಾಡಿ ಟೋಲ್ ಗೇಟ್‍ನಿಂದ ಸುಳ್ಯ ಸಂಪಾಜೆ ಗೇಟ್‍ವರೆಗೆ ನಡೆಯಲಿರುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮಕ್ಕೆ ಸೆ.15ರ ಭಾನುವಾರ ಚಾಲನೆ ನೀಡಲಾಗಿದೆ.

Advertisement

ಹೆದ್ದಾರಿಯುದ್ದಕ್ಕೂ ಸಾವಿರಾರು ವಿದ್ಯಾರ್ಥಿಗಳು, ಸಂಘ-ಸಂಸ್ಥೆಯ ಪ್ರಮುಖರು ಭಾಗಿಯಾಗಿದ್ದು, ಜಿಲ್ಲೆಯ ಸಭಾ ಕಲಾಪ ಮಂಗಳೂರಿನ ಕೆಪಿಟಿ ಸರ್ಕ್ಯೂಟ್ ಹೌಸ್ ಬಳಿ ಆರಂಭವಾಗಿದೆ.

ಬೆಳಿಗ್ಗೆ 9.30 ರಿಂದ ಮಾನವ ಸರಪಳಿ ಆರಂಭವಾಗಿದ್ದು ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದಾರೆ. ವಿವಿಧ ಕಲಾತಂಡಗಳಿಂದ ಸಾಂಸ್ಕೃತಿಕ ವೈಭವ ನಡೆಯಲಿದೆ.

ಸಂಸದ ಕ್ಯಾ/ಬ್ರಿಜೇಶ್ ಚೌಟ, ವಿ.ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next