Advertisement

ಮಂಗಳೂರು: ಪ್ರಗತಿಪರ ಸಂಘಟನೆ ವತಿಯಿಂದ ಸಾಮೂಹಿಕ ಧರಣಿ

01:10 PM Jan 02, 2020 | Naveen |

ಮಂಗಳೂರು: ಮಂಗಳೂರು ಗೋಲಿಬಾರ್ ಪ್ರಕರಣವನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ವತಿಯಿಂದ ಗುರುವಾರ ನಗರದ ಟೌನ್ ಹಾಲ್ ಎದುರು ಸಾಮೂಹಿಕ ಧರಣಿ ನಡೆಯಿತು.

Advertisement

ಜಿಲ್ಲೆಯ ನಾನಾ ಪ್ರಗತಿಪರ ಸಂಘಟನೆಗಳು ಧರಣಿಯಲ್ಲಿ ಭಾಗಿಯಾದವು. ಜಿಲ್ಲಾ ಕಾಂಗ್ರೇಸ್ ಮುಖಂಡರಾದ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಅಭಯಚಂದ್ರ ಜೈನ್, ಪರಿಷತ್ ಸದಸ್ಯ ಐವನ್ ಡಿಸೋಜ ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

ಘಟನೆಯಲ್ಲಿ ಅಮಾಯಕರ ಬಂಧನವಾಗಿದೆ, ಅವರನ್ನ ತಕ್ಷಣ ಬಿಡುಗಡೆಗೊಳಿಸಬೇಕು. ಗೋಲಿಬಾರ್ ನಲ್ಲಿ ಮೃತ ಕುಟುಂಬಕ್ಕೆ ಪರಿಹಾರ ನೀಡುವಂತೆ, ಘಟನೆ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಬೇಡ, ನ್ಯಾಯಾಂಗ ತನಿಖೆಯೇ ನಡೆಯಬೇಕು, ಸಿಎಎ, ಎನ್ ಆರ್ ಸಿ ತಿರಸ್ಕರಿಸುವಂತೆ ಧರಣಿ ನಿರತ ಸಂಘಟನೆಗಳ ಮುಖಂಡರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next