Advertisement

Mangaluru; MSPC ಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಸಚಿವೆ ಹೆಬ್ಬಾಳ್ಕರ್

08:56 PM Jul 13, 2024 | Team Udayavani |

ಮಂಗಳೂರು: ನಗರದ ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ( M.S.P.C ) ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶನಿವಾರ ದಿಢೀರ್ ಭೇಟಿ ನೀಡಿ, ಪುಷ್ಟಿ ಇನ್ನಿತರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿ, ಪರಿಶೀಲನೆ ನಡೆಸಿದರು.

Advertisement

ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ವಿತರಿಸಲಾಗುವ ಆಹಾರ ಸಾಮಗ್ರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್, ಜಿಲ್ಲಾ ನಿರೂಪಣಾ ಅಧಿಕಾರಿ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ, ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ನಿರ್ವಹಣಾ ಅಧಿಕಾರಿ ಶೈಲಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next