Advertisement

ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯಕ್ಕೆ ಹೋದ ಯುವತಿ ನಾಪತ್ತೆ

09:56 PM Jul 03, 2022 | Team Udayavani |

ಮಂಗಳೂರು : ಮಂಗಳೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಶೌಚಾಲಯಕ್ಕೆಂದು ಹೋದ ದೀಪಿಕಾ (19) ನಾಪತ್ತೆಯಾಗಿರುವುದಾಗಿ ಆಕೆಯ ತಂದೆ ಹಾವೇರಿ ಹಾನಗಲ್‌ ತಾಲೂಕಿನ ಹಾನಗಲ್‌ ತಾಲೂಕಿನ ನಿವಾಸಿ ನಾಗರಾಜ್‌ ಫ‌ಕೀರಪ್ಪ ಗೊಲ್ಲರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

ನಾಗರಾಜ್‌ ಫ‌ಕೀರಪ್ಪ ಗೊಲ್ಲರ ಅವರು ಮಂಡಿನೋವಿನ ಚಿಕಿತ್ಸೆಗಾಗಿ ಮಂಗಳೂರಿಗೆ ಪುತ್ರಿ ದೀಪಿಕಾ ಜತೆಯಲ್ಲಿ ಹೊರಟು ಜು. 2ರಂದು ಬೆಳಗ್ಗೆ 5 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ತಲುಪಿದ್ದರು. ಅಲ್ಲಿ ನಾಗರಾಜ್‌ ಪುರುಷರ ಶೌಚಾಲಯಕ್ಕೆ ತೆರಳಿದ್ದರು.

ದೀಪಿಕಾ ಮಹಿಳೆಯರ ಶೌಚಾಲಯಕ್ಕೆ ತೆರಳಿದ್ದರು. ನಾಗರಾಜ್‌ ಅವರು ಶೌಚಾಲಯದಿಂದ ಹೊರಗೆ ಬಂದು ದೀಪಿಕಾಳಿಗೆ ಕಾದು ಕುಳಿತರೂ ಆಕೆ ಬಂದಿರಲಿಲ್ಲ. ಬಸ್‌ ನಿಲ್ದಾಣದ ವಠಾರದಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಬರ್ಕೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next