Advertisement

Mangaluru; ಧರ್ಮಕ್ಕೆ ಅವಹೇಳನ ಮಾಡಿದ ಶಿಕ್ಷಕಿಯ ಅಮಾನತಿಗೆ ಶಾಸಕರು, ಹಿಂದೂ ಮುಖಂಡರ ಪಟ್ಟು

12:29 PM Feb 12, 2024 | Team Udayavani |

ಮಂಗಳೂರು: ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಪಾಠ ಮಾಡಿದ ಶಿಕ್ಷಕಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಶಾಸಕರು ಮತ್ತು ಹಿಂದೂ ಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

Advertisement

ಜಿಲ್ಲಾ ಪಂಚಾಯತ್ ಕಚೇರಿ ಎದುರು ಜಮಾಯಿಸಿದ ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ವಿದ್ಯಾರ್ಥಿಗಳ ಪೋಷಕರು, ಹಿಂದೂ ಕಾರ್ಯಕರ್ತರು, ಮುಖಂಡರು ಶಿಕ್ಷಿಕಿಯನ್ನು ವಜಾ ಮಾಡಬೇಕು, ಪ್ರಕರಣ ದಾಖಲಿಸಬೇಕೆಂದು ಡಿಡಿಪಿಐಗೆ ಒತ್ತಾಯಿಸಿದರು.

ರಾಮನ ಬಗ್ಗೆ ಮಾತನಾಡಲು ಇವರು ಯಾರು? ಇವರು ಪಾಠ ಮಾಡಲಿ ಸಾಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶಾಲೆಗೆ ಅಧಿಕಾರಿಗಳ ತಂಡವನ್ನು ಕಳುಹಿಸಿದ್ದು, ಅವರು ನೀಡುವ ವರದಿ ಮೇಲೆ ಕ್ರಮ ಕೈಗೊಳ್ಳುತ್ತೇವೆ” ಎಂದು ಡಿಡಿಪಿಐ ಹೇಳಿದರು.

Advertisement

“ಮಕ್ಕಳು ಸುಳ್ಳು ಹೇಳುವುದಿಲ್ಲ. ಕೂಡಲೇ ಕ್ರಮ ಕೈಗೊಳ್ಳಿ” ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.

ಅವಹೇಳನಕಾರಿಯಾಗಿ ಪಾಠ ಮಾಡಿದ ಶಿಕ್ಷಕಿಯನ್ನು ಸ್ಥಳದಲ್ಲೇ ಅಮಾನತು ಆದೇಶ ಹೊರಡಿಸಿ ಎಂದು ಪಟ್ಟು ಹಿಡಿಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next