Advertisement

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

09:25 PM Oct 06, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಸಂಸದೀಯ ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.

Advertisement

ಈ ಸ್ಥಾಯಿ ಸಮಿತಿಯು ಕೇಂದ್ರ ಇಂಧನ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ ಮೇಲುಸ್ತುವಾರಿಗಳ ಬಗ್ಗೆ ಕಾರ್ಯನಿರ್ವಹಿಸಲಿದೆ.

ಇದೀಗ ಸ್ಥಾಯಿ ಸಮಿತಿಗೆ ನೇಮಕಗೊಂಡಿರುವ ಕ್ಯಾ. ಚೌಟ ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲ ರೀತಿಯ ನೀತಿ-ನಿಯಮಗಳು, ಕಾರ್ಯಯೋಜನೆಗಳ ಬಗ್ಗೆ ಪುನರ್‌ ಪರಿಶೀಲಿಸುವ ಹಾಗೂ ನಿಗಾ ವಹಿಸುವಲ್ಲಿ ಪಾತ್ರವಹಿಸಲಿದ್ದಾರೆ. ಈ ಸಂಸದೀಯ ಸ್ಥಾಯಿ ಸಮಿತಿಯ ಮೊದಲ ಸಭೆಯು ಅ.7ರಂದು ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next