Advertisement

Mangaluru ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಕ್ಕೆ ಸೂಚನೆ

12:30 AM Dec 13, 2023 | Team Udayavani |

ಮಂಗಳೂರು: ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿರುವುದಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ಅಸಮಾಧಾನ ವ್ಯಕ್ತಪಡಿಸಿದ್ದು, ತ್ವರಿತಗೊಳಿಸಲು ಸೂಚಿಸಿದ್ದಾರೆ.

Advertisement

ಮಂಗಳವಾರ ವಿವಿಧ ಯೋಜನೆ ಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಬಿ.ಸಿ.ರೋಡ್‌, ಮಾಣಿಯಲ್ಲಿ ಹೆದ್ದಾರಿ ಕಾಮಗಾರಿ ಬಹಳ ನಿಧಾನ ವಾಗಿದ್ದು ಸುಗಮ ಸಂಚಾರಕ್ಕೂ ತೀವ್ರ ತೊಂದರೆಯಾಗುತ್ತಿದೆ. ತ್ವರಿತಗತಿಯಲ್ಲಿ ಕಾಮಗಾರಿ ನಡೆಸು ವಂತೆ ಅವರು ಹೆದ್ದಾರಿ ಇಲಾಖೆ ಅಧಿ ಕಾರಿಗಳಿಗೆ ತಾಕೀತು ಮಾಡಿದರು.

ಕದ್ರಿ ಪಾರ್ಕ್‌: ಕದ್ರಿ ಪಾರ್ಕ್‌ ವೀಕ್ಷಣೆಗೆ ಬಂದ ಸಾರ್ವಜನಿಕರಿಗೆ ಆಹ್ಲಾದಕರ ವಾತಾವರಣ ಇರಬೇಕು. ಕದ್ರಿ ಪಾರ್ಕಿಗೆ ಸಾಗುವ ರಸ್ತೆಯಲ್ಲಿ ಜನದಟ್ಟಣೆ ಆಗದ ಹಾಗೆ ನೋಡಿ ಕೊಳಬೇಕು. ಫುಟ್‌ಪಾತ್‌ಗಳ ಮೇಲಿರುವ ಬೀದಿ ವ್ಯಾಪಾರಿಗಳ ಬಗ್ಗೆ ಮತ್ತು ಪಾರ್ಕಿಂಗ್‌ ವ್ಯವಸ್ಥೆಗಳ ಬಗ್ಗೆ ಮತ್ತು ಸ್ವತ್ಛತೆಯ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಕಾವೂರು ಕೆರೆ ಹಾಗೂ ಗುಜ್ಜರೆ ಕೆರೆಗಳನ್ನು ಸ್ವತ್ಛವಾಗಿ ಇರಿಸಲು ಮತ್ತು ನೀರಿನ ಸೌಕರ್ಯಗಳು ಅಚ್ಚುಕಟ್ಟಾಗಿ ನಿರ್ವಹಿಸಲು ಸಮಿತಿ ರಚಿಸಲು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ, ಪ್ರಸ್ತಾವನೆ ಸಲ್ಲಿಸಲು ಅವರು ತಿಳಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next