Advertisement

ಮಂಗಳೂರು: ನಿಲ್ಲಿಸಿದ್ದ ಟಿಪ್ಪರಿಗೆ ರಿಕ್ಷಾ ಡಿಕ್ಕಿ ಹೊಡೆದು ಚಾಲಕ ಸಾವು , ಮೂವರಿಗೆ ಗಾಯ

12:57 PM Oct 07, 2020 | sudhir |

ಮಂಗಳೂರು : ನಿಲ್ಲಿಸಿದ್ದ ಟಿಪ್ಪರ್ ಗೆ ರಿಕ್ಷಾವೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸಾವನ್ನಪ್ಪಿದ್ದು ಉಳಿದ ಮೂವರು ಗಾಯಗೊಂಡ ಘಟನೆ ಮರೋಳಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ.

Advertisement

ಘಟನೆಯಲ್ಲಿ ಸಾವನ್ನಪ್ಪಿದ ರಿಕ್ಷಾ ಚಾಲಕನನ್ನು ವಳಚ್ಚಿಲ್ ನಿವಾಸಿ ಸಲೀಂ(40) ಎನ್ನಲಳಾಗಿದ್ದು ಉಳಿದ ಮೂವರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಲ್ಪೆಯಿಂದ ಮೀನು ತುಂಬಿಕೊಂಡು ರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ಮರೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಲವು ವರ್ಷಗಳಿಂದ ನಿಂತಿದ್ದ ಟಿಪ್ಪರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು ತಕ್ಷಣ ವೆನ್ಲಾಕ್ ಆಸ್ಪತ್ರೆಗೆ ಸಾಗಿಸಿದರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.

ಹೆದ್ದಾರಿಯಿಂದ ಟಿಪ್ಪರ್ ತೆರವು :
ಬೃಹತ್ ಗಾತ್ರದ ಕಲ್ಲುಗಳನ್ನು ತುಂಬಿದ್ದ ಟಿಪ್ಪರ್ ಒಂದು ಕಳೆದ ಹಲವು ವರ್ಷಗಳಿಂದ ಹೆದ್ದಾರಿಯಲ್ಲಿ ನಿಂತಿದ್ದು ಇಂದು ನಡೆದ ಅವಘಡದಿಂದ ಎಚ್ಚೆತ್ತ ಅಧಿಕಾರಿಗಳು ರಸ್ತೆಯಲ್ಲಿ ನಿಂತಿದ್ದ ಟಿಪ್ಪರನ್ನು ಕ್ರೇನ್ ಮೂಲಕ ಸ್ಥಳಾಂತರಿಸಲಾಯಿತು.

Advertisement

Advertisement

Udayavani is now on Telegram. Click here to join our channel and stay updated with the latest news.

Next