Advertisement

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

12:41 AM Apr 20, 2024 | Team Udayavani |

ಮಂಗಳೂರು: ಬೆಲೆ ಕಡಿಮೆ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಬಿಜೆಪಿ ಅವಧಿಯಲ್ಲಿ ಪೆಟ್ರೋಲ್‌, ಡೀಸೆಲ್‌, ಗ್ಯಾಸ್‌ ಸಿಲಿಂಡರ್‌ ಸಹಿತ ದಿನಬಳಕೆಯ ವಸ್ತುಗಳ ದರ ಗಗನಕ್ಕೇರಿದೆ. ಹತ್ತು ವರ್ಷಗಳ ಹಿಂದೆ ಬಿಜೆಪಿ ಘೋಷಿಸಿದ “ಅಚ್ಛೇದಿನ್‌’ ಇನ್ನೂ ಆಶ್ವಾಸನೆಯಾಗಿಯೇ ಉಳಿದಿದ್ದು, ಕಾಂಗ್ರೆಸ್‌ನ ಗ್ಯಾರಂಟಿ ಅಲೆಗೆ ಬಿಜೆಪಿ ಕೊಚ್ಚಿ ಹೋಗಲಿದೆ ಎಂದು ಮಹಿಳಾ ಕಾಂಗ್ರೆಸ್‌ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ್‌ ಹೇಳಿದರು.

Advertisement

ಕಾಂಗ್ರೆಸ್‌ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಂಚ ನ್ಯಾಯದಡಿ 25 ಗ್ಯಾರಂಟಿಯ ನ್ಯಾಯಪತ್ರ ಬಿಡುಗಡೆ ಮಾಡಿರುವ ಕಾಂಗ್ರೆಸ್‌ ಅನ್ನು ಮತದಾರರು ಕೈಹಿಡಿಯಲಿದ್ದಾರೆ. ಬಿಜೆಪಿಯು “ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಸುಳ್ಳು ಪತ್ರವನ್ನು ಬಿಡುಗಡೆ ಮಾಡಿದೆ. ಆದರೆ ಗ್ಯಾರಂಟಿ ಯೋಜನೆಗಳ ಮೂಲಕ ಅಚ್ಛೇದಿನ್‌ ಸಾಕಾರ ಮಾಡಿದ್ದು ಕಾಂಗ್ರೆಸ್‌. ಜನರಿಗೆ ಬಿಜೆಪಿಯ ಸುಳ್ಳು ಭರವಸೆಗಳ ಬಗ್ಗೆ ಅರಿವಾಗಿದೆ ಎಂದು ಅವರು ಹೇಳಿದರು. ದ. ಕ. ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿಂದ ಜನರಿಗೆ ಏನು ನ್ಯಾಯ ಸಿಕ್ಕಿದೆ ಎಂದು ಪ್ರಶ್ನಿಸಿದ ಅವರು, ಪದ್ಮರಾಜ್‌ ಅವರನ್ನು ಬೆಂಬಲಿಸುವಂತೆ ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next