Advertisement

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

03:04 AM Oct 24, 2024 | Team Udayavani |

ಮಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಟಾಕಿ ಮಾರಾಟ ಮಾಡಲು ನಿಗದಿಗೊಳಿಸಿದ ಕೆಲವು ಸ್ಥಳಗಳು ಚರ್ಚೆಗೆ ಕಾರಣವಾಗಿವೆ.

Advertisement

ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ, ಟೆಂಡರ್‌ ಪ್ರಕ್ರಿಯೆಗೆ ಬುಧವಾರ ಮಂಗಳೂರಿನ ನೆಹರೂ ಮೈದಾನಕ್ಕೆ ಪಾಲಿಕೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಕ್ರಿಕೆಟ್‌ ಅಸೋಸಿಯೇಶನ್‌ನಿಂದ ವಿರೋಧ ವ್ಯಕ್ತವಾಗಿದೆ. ಗೀತಾಂಜಲಿ ಅವರು ಮಾಧ್ಯಮದ ಜತೆ ಮಾತನಾಡಿ, “ಮೈದಾನದಲ್ಲಿ ಪಟಾಕಿ ಅಂಗಡಿ ತೆರೆಯಲು ಟೆಂಡರ್‌ ಇದ್ದು ಗೇಟ್‌ ತೆರೆಯುವಂತೆ ಪಾಲಿಕೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಈ ಕುರಿತು ಲಿಖಿತವಾಗಿ ನೀಡುವಂತೆ ನಾವು ಅವರಲ್ಲಿ ಕೇಳಿಕೊಂಡೆವು. ಆದರೆ ಅಧಿಕಾರಿಗಳು ಜಿಲ್ಲಾಡಳಿತದ ಅನುಮತಿ ಇದೆ ಎನ್ನುತ್ತಿದ್ದಾರೆ. ನೆಹರೂ ಮೈದಾನವನ್ನು ಆಟೋಟ ಸ್ಪರ್ಧೆಗೆ ಮಾತ್ರ ಉಪಯೋಗಿಸಬೇಕು ಎಂದು ನ್ಯಾಯಾಲಯವೂ ಹೇಳಿದೆ. ಈ ವಿಷಯವನ್ನೂ ಅವರ ಗಮನಕ್ಕೆ ತಂದಿದ್ದೇವೆ’ ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next