Advertisement
ಎಂಆರ್ಪಿಎಲ್ ಉದ್ಯೋಗಿ ಅಶೋಕ್ಕುಮಾರ್ ಹೆಗ್ಡೆ ಅವರು ಕಾರ್ಕಳ ಕಡ್ತಲ ಗ್ರಾಮದಲ್ಲಿರುವ ತಮ್ಮ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ.
ಮೂಡುಬಿದಿರೆಯ ಬಡಗ ಮಿಜಾರ್ ಮರಕಡ ಕ್ರಾಸ್ ನಿವಾಸಿ ಕಮಲಾಕ್ಷ ಶೆಟ್ಟಿ ಅವರ ಮನೆಯ ಬಾವಿಗೆ ಮಳೆಕೊಯ್ಲು ಅಳವಡಿಕೆ ಮಾಡಲಾಗಿದೆ. ಅಂದಾಜು 12 ಸಾವಿರ ರೂ. ವೆಚ್ಚದಲ್ಲಿ ಈ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಛಾವಣಿ ನೀರನ್ನು ಪೈಪ್ ಮುಖಾಂತರ ಟ್ಯಾಂಕ್ಗೆಬಿಟ್ಟು ಶುದ್ಧೀಕೃತ ನೀರನ್ನು ಬಾವಿಗೆ ಬೀಳುವಂತೆ ನೋಡಿಕೊಳ್ಳಲಾಗಿದೆ. ಕಮಲಾಕ್ಷ ಅವರಿಂದ ಪ್ರೇರಣೆಗೊಂಡು ಪಕ್ಕದ ಮನೆಯವರೂ ಮಳೆಕೊಯ್ಲು ಅಳವಡಿಸಿಕೊಂಡಿದ್ದಾರೆ.
Related Articles
Advertisement
ಸಿಎಸ್ಐ ಚರ್ಚ್ನಲ್ಲಿ ಜಲ ಸಂರಕ್ಷಣೆ
ಈ ಬೇಸಗೆಯಲ್ಲಿ ಉಂಟಾದ ನೀರಿನ ಬವಣೆ ಮುಂದಿನ ದಿನಗಳಲ್ಲಿ ಆಗದಿರಲಿ ಎಂಬ ಸದಾಶಯದೊಂದಿಗೆ ಬೊಕ್ಕಪಟ್ಣದ ಸಿಎಸ್ಐ ವಿಶ್ರಾಂತಿ ದೇವಾಲಯದ ಸದಸ್ಯರು ದೇವಾಲಯದ ಆವರಣದಲ್ಲಿರುವ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ. ಸ್ಯಾಮುವೆಲ್ ಜಾನ್ ಲೀ ಕರ್ಕಡ, ಜೋಶಿ ಜನಾಸ್, ಜೋಯಲ್ ಕರ್ಕಡ, ಸಂದೀಪ್ ಕೈರನ್ನ ಅವರು ಶ್ರಮದಾನದ ಮೂಲಕ ಒಂದು ವಾರದಲ್ಲಿ ಮಳೆಕೊಯ್ಲು ಅಳವಡಿಕೆ ಮಾಡಿದ್ದಾರೆ. ಸಭಾ ಪಾಲಕರಾದ ರೆ| ವಿಲಿಯಂ ಕುಂದರ್, ಗೊಡ್ವಿನ್ ಕಾರ್ಯಪ್ಪ ಅವರ ಪ್ರೋತ್ಸಾಹ ಮತ್ತು ಉತ್ಸಾಹಿ ಕುಟುಂಬಗಳ ಧನಸಹಾಯ ನೀಡಿರುವುದರಿಂದ ಇದು ಸಾಧ್ಯವಾಗಿದೆ. ‘ಉದಯವಾಣಿ ಮಳೆಕೊಯ್ಲು ಅಭಿಯಾನವೇ ನಮಗೆ ಪ್ರೇರಣೆಯಾಯಿತು’ ಎಂದು ಸಿಎಸ್ಐ ವಿಶ್ರಾಂತಿ ಸಭೆಯ ಸದಸ್ಯರು ತಿಳಿಸಿದ್ದಾರೆ.
ಸಿಎಸ್ಐ ಚರ್ಚ್ನಲ್ಲಿ ಜಲ ಸಂರಕ್ಷಣೆಈ ಬೇಸಗೆಯಲ್ಲಿ ಉಂಟಾದ ನೀರಿನ ಬವಣೆ ಮುಂದಿನ ದಿನಗಳಲ್ಲಿ ಆಗದಿರಲಿ ಎಂಬ ಸದಾಶಯದೊಂದಿಗೆ ಬೊಕ್ಕಪಟ್ಣದ ಸಿಎಸ್ಐ ವಿಶ್ರಾಂತಿ ದೇವಾಲಯದ ಸದಸ್ಯರು ದೇವಾಲಯದ ಆವರಣದಲ್ಲಿರುವ ಬಾವಿಗೆ ಮಳೆಕೊಯ್ಲು ಅಳವಡಿಸಿದ್ದಾರೆ. ಸ್ಯಾಮುವೆಲ್ ಜಾನ್ ಲೀ ಕರ್ಕಡ, ಜೋಶಿ ಜನಾಸ್, ಜೋಯಲ್ ಕರ್ಕಡ, ಸಂದೀಪ್ ಕೈರನ್ನ ಅವರು ಶ್ರಮದಾನದ ಮೂಲಕ ಒಂದು ವಾರದಲ್ಲಿ ಮಳೆಕೊಯ್ಲು ಅಳವಡಿಕೆ ಮಾಡಿದ್ದಾರೆ. ಸಭಾ ಪಾಲಕರಾದ ರೆ| ವಿಲಿಯಂ ಕುಂದರ್, ಗೊಡ್ವಿನ್ ಕಾರ್ಯಪ್ಪ ಅವರ ಪ್ರೋತ್ಸಾಹ ಮತ್ತು ಉತ್ಸಾಹಿ ಕುಟುಂಬಗಳ ಧನಸಹಾಯ ನೀಡಿರುವುದರಿಂದ ಇದು ಸಾಧ್ಯವಾಗಿದೆ. ‘ಉದಯವಾಣಿ ಮಳೆಕೊಯ್ಲು ಅಭಿಯಾನವೇ ನಮಗೆ ಪ್ರೇರಣೆಯಾಯಿತು’ ಎಂದು ಸಿಎಸ್ಐ ವಿಶ್ರಾಂತಿ ಸಭೆಯ ಸದಸ್ಯರು ತಿಳಿಸಿದ್ದಾರೆ.
ಅಭಿಯಾನವೇ ಪ್ರೇರಣೆ
ಉದಯವಾಣಿ ಸುದಿನದ ಮನೆ ಮನೆಗೆ ಮಳೆಕೊಯ್ಲು ಅಭಿಯಾನ ಯಶಸ್ಸು ಕಂಡಿದ್ದು, ಇದರಿಂದ ಪ್ರೇರಿತರಾಗಿ ಹೆಚ್ಚಿನ ಮಂದಿ ತಮ್ಮ ಮನೆಯಲ್ಲಿ ಮಳೆಕೊಯ್ಲು ಅಳವಡಿಸಿದ್ದಾರೆ.ಇದಕ್ಕೆ ಸರಕಾರ ಕೂಡ ಪ್ರೋತ್ಸಾಹ ನೀಡಬೇಕಿದೆ. ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಬಾವಿಗೂ ಮಳೆಕೊಯ್ಲು ಅಳವಡಿಸಬೇಕು. ನಾವು ಕೂಡ ಮಳೆಕೊಯ್ಲು ಅಳವಡಿಸಿದ್ದು ನಮಗೆ ‘ಉದಯವಾಣಿ’ ಅಭಿಯಾನವೇ ಪ್ರೇರಣೆ.
– ಮೇಘನಾ ಆಚಾರ್ಯ,ವಾಮಂಜೂರು