Advertisement

Mangaluru: ಅತ್ಯಾಚಾರ ಆರೋಪ ಪ್ರಕರಣ: ಖುಲಾಸೆ

09:23 PM Sep 02, 2024 | Team Udayavani |

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ ಆರೋಪ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

Advertisement

2019ರಲ್ಲಿ ಆರೋಪಿ ಚಾಲಕ ಉಮೇಶ್‌ ಸಾಲ್ಯಾನ್‌ ಯುವತಿಯೊಂದಿಗೆ ಆತ್ಮೀಯತೆಯಿಂದಿದ್ದು, ತಂದೆಯ ಶಸ್ತ್ರಚಿಕಿತ್ಸೆಗೆ 1 ಲ.ರೂ. ಪಡೆದುಕೊಂಡು ಅದನ್ನು 2 ತಿಂಗಳಲ್ಲಿ ನೀಡುವುದಾಗಿ ಹೇಳಿದ್ದ. ಯುವತಿ ಆ ಹಣವನ್ನು ಕೇಳಿದಾಗ ಕೊಡದೆ ಸತಾಯಿಸುತ್ತಿದ್ದ. ನ. 20ರಂದು ಹಣ ನೀಡುವುದಾಗಿ ತನ್ನ ಮನೆಗೆ ಕರೆಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ. ಆದರೆ ಅನಂತರ ಮದುವೆಯಾಗಲು ಒಪ್ಪಿರಲಿಲ್ಲ. ಯುವತಿ ಮಗುವಿಗೆ ಜನ್ಮ ನೀಡಿದ್ದಳು. ಈ ಕುರಿತು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್‌.ವಿ. ಅವರು ಸಾಕ್ಷ್ಯಗಳ ಕೊರತೆಯಿಂದಾಗಿ ಆರೋಪಿ ಉಮೇಶ್‌ ಸಾಲ್ಯಾನ್‌ ಅವರನ್ನು ಖುಲಾಸೆಗೊಳಿಸಿ ಆ. 29ರಂದು ತೀರ್ಪು ನೀಡಿದ್ದಾರೆ. ಆರೋಪಿ ಪರ ವಕೀಲರಾದ ಬಿ. ಅರುಣ ಬಂಗೇರ ಮತ್ತು ರಿಹಾನಾ ಪರ್ವೀನ್‌ ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next