Advertisement

ಯೆಯ್ನಾಡಿ ಜಂಕ್ಷನ್‌ನಲ್ಲಿ ಕಾರು ಢಿಕ್ಕಿ: ಸ್ಕೂಟರ್‌ ಸವಾರ ಸಾವು

12:00 AM Apr 26, 2023 | Team Udayavani |

ಮಂಗಳೂರು: ಕಾರು ಢಿಕ್ಕಿಯಾಗಿ ಸ್ಕೂಟರ್‌ ಸವಾರ ಮೃತಪಟ್ಟ ಘಟನೆ ನಗರದ ಯೆಯ್ನಾಡಿ ಜಂಕ್ಷನ್‌ನಲ್ಲಿ ಸಂಭವಿಸಿದೆ.

Advertisement

ಸೋಮಲಿಂಗ (17) ಮೃತ ಪಟ್ಟವರು. ಅವರು ಸೋಮವಾರ ರಾತ್ರಿ 12 ಗಂಟೆಗೆ ಚೇತನ್‌ ನಾಯ್ಕ ಅವರನ್ನು ಸ್ಕೂಟರ್‌ನಲ್ಲಿ ಕುಳ್ಳಿರಿಸಿ ಕೊಂಡು ಬಾರೆಬೈಲ್‌ ಕಡೆಯಿಂದ ಯೆಯ್ನಾಡಿ ಜಂಕ್ಷನ್‌ ಕಡೆಗೆ ಬಂದು ಕಾವೂರು ಕಡೆಗೆ ಹೋಗುತ್ತಿದ್ದಾಗ ಕೆಪಿಟಿ ಕಡೆಯಿಂದ ಮೇರಿಹಿಲ್‌ ಕಡೆಗೆ ಹೋಗುತ್ತಿದ್ದ ಆಮ್ನಿ ಕಾರು ಢಿಕ್ಕಿ ಹೊಡೆಯಿತು. ಪರಿಣಾಮವಾಗಿ ಸೋಮಲಿಂಗ ಅವರು ಕಾರಿನ ಗಾಜಿನ ಮೇಲೆ ಎಸೆಯಲ್ಪಟ್ಟು ಡಿವೈಡರ್‌ ಮೇಲೆ ಬಿದ್ದು ಗಂಭೀರವಾಗಿ ಗಾಯ ಗೊಂಡಿದ್ದರು. ಚಿಕಿತ್ಸೆ ಫ‌ಲಕಾರಿಯಾಗದೆ ಮಂಗಳವಾರ ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತಕ್ಕೆ ಕಾರಣನಾದ ಕಾರು ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಮಂಗಳೂರು ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next