Advertisement

ಮಂಗಳೂರು: ಕಾಲೇಜಿನಲ್ಲಿ ಸಾವರ್ಕರ್ ಫೋಟೋ; ವಿವಾದದ ಬಳಿಕ ತೆರವು

08:31 PM Jun 08, 2022 | Team Udayavani |

ಮಂಗಳೂರು : ನಗರದ ಕಾಲೇಜೊಂದರಲ್ಲಿ ಕೆಲವು ವಿದ್ಯಾರ್ಥಿಗಳು ತರಗತಿಯಲ್ಲಿ ಸಾವರ್ಕರ್ ಫೋಟೋ ಹಾಕಿದ್ದು ವಿವಾದಕ್ಕೆ ಗುರಿಯಾಗಿ ಬಳಿಕ ತೆರವುಗೊಳಿಸಲಾಗಿದೆ.

Advertisement

ಸೋಮವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ವಿದ್ಯಾಾರ್ಥಿಗಳಿಬ್ಬರು ಭಾರತಮಾತೆ ಮತ್ತು ಸಾವರ್ಕರ್ ಫೋಟೋಗಳನ್ನು ತರಗತಿಯ ಕರಿಹಲಗೆಯ ಮೇಲೆ ಹಾಕಿದ್ದರು. ಈ ಕುರಿತು ಇತರ ವಿದ್ಯಾರ್ಥಿಗಳು ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು.

ಮಂಗಳವಾರ ಬೆಳಗ್ಗೆೆ ಪ್ರಾಂಶುಪಾಲರು ಆಗಮಿಸಿ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ, ಅನಧಿಕೃತವಾಗಿ ಹಾಕಿದ್ದ ಫೋಟೊಗಳನ್ನು ತೆರವುಗೊಳಿಸಿದ್ದಾರೆ.

ಸಾವರ್ಕರ್ ಫೋಟೊ ಹಾಕಿ ವಿದ್ಯಾರ್ಥಿಗಳು ವಿಡಿಯೋ ಚಿತ್ರೀಕರಣ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಮಾತ್ರವಲ್ಲದೆ, ಕಾಲೇಜಿನ ನೂರಾರು ವಿದ್ಯಾರ್ಥಿಗಳು ಈ ವಿಡಿಯೋವನ್ನು ಹಂಚಿಕೊಂಡಿದ್ದರು,ಹೀಗಾಗಿ ಈ ಘಟನೆ ಬೆಳಕಿಗೆ ಬಂದು ಭಾರಿ ಸುದ್ದಿಯಾಗಿದೆ.

ಘಟನೆಯ ಬಳಿಕ ಕಾಲೇಜು ಮಂಗಳವಾರ ಬೆಳಗ್ಗೆೆ ಅನುಮತಿ ಇಲ್ಲದೆ ತರಗತಿಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿ ತಪ್ಪೊೊಪ್ಪಿಗೆ ಪಡೆದುಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next