Advertisement

Mangaluru: ರಸ್ತೆ ವಿಭಜಕಕ್ಕೆ ಸ್ಕೂಟರ್ ಢಿಕ್ಕಿ; ಇಬ್ಬರು ಸಾವು

11:12 PM Jun 28, 2023 | Team Udayavani |

ಮಂಗಳೂರು: ನಗರದ ಮೇರಿಹಿಲ್ ಬಳಿ ಬುಧವಾರ ರಾತ್ರಿ ಸ್ಕೂಟರ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸವಾರ ಹಾಗೂ ಸಹ ಸವಾರ ಮೃತಪಟ್ಟಿದ್ದಾರೆ.

Advertisement

ಪಚ್ಚನಾಡಿಯ ಪವನ್ ಹಾಗೂ ಚಿರಾಗ್ ಮೃತಪಟ್ಟವರು. ನಗರದಿಂದ ಪದವಿನಂಗಡಿ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಅಪಘಾತ ನಡೆದಿದೆ. ಓರ್ವ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಟಿದ್ದು, ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next