Advertisement

Mangaluru: ತಡರಾತ್ರಿ ವಿಧಾನ ಪರಿಷತ್‌ ಸದಸ್ಯ ಐವನ್‌ ಮನೆಗೆ ಕಲ್ಲು; ಆರೋಪಿಗಳಿಗಾಗಿ ಶೋಧ

05:13 PM Aug 22, 2024 | Team Udayavani |

ಮಂಗಳೂರು: ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಧಾನ ಪರಿಷತ್‌ ಐವನ್‌ ಡಿ’ಸೋಜಾ ಅವರ ಮನೆಗೆ ಬುಧವಾರ ತಡರಾತ್ರಿ ಅಪರಿಚಿತ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ಪರಾರಿಯಾಗಿದ್ದಾರೆ.

Advertisement

ನಗರದ ವೆಲೆನ್ಸಿಯಾದಲ್ಲಿರುವ ಮನೆ ಮೇಲೆ ಕಲ್ಲು ತೂರಾಟ ನಡೆದಿದ್ದು, ಐವನ್‌ ಡಿ’ಸೋಜಾ ಅವರು ಪಕ್ಷದ ಸಭೆಯಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳಿದ್ದರು. ಮನೆಯ ಇತರ ಸದಸ್ಯರು ಮನೆಯಲಿದ್ದರು. ಘಟನೆಯಲ್ಲಿ ಮನೆಗೆ ಯಾವುದೇ ಹಾನಿಯಾಗಿಲ್ಲ. ಗಾಜಿನ ಕಿಟಕಿಯ ಫ್ರೇಮ್‌ಗೆ ಕಲ್ಲು ಬಿದ್ದಿದ್ದು, ಮನೆಯ ಅಂಗಣದೊಳಗೆ ಕಲ್ಲು ಕಂಡು ಬಂದಿದೆ.

ಆರಂಭಿಕ ವರದಿ ಪ್ರಕಾರ ಬೈಕ್‌ನಲ್ಲಿ ಬಂದ ಇಬ್ಬರು ಬಂದು ಕಲ್ಲು ಎಸೆದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ. ಸ್ಥಳದಲ್ಲಿರುವ ಸಿಸಿ ಕ್ಯಾಮೆರಾ ಫೂಟೇಜ್‌ಗಳನ್ನು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: PM Modi in Poland; ಯಾವುದೇ ಸಮಸ್ಯೆ ಯುದ್ಧ ಭೂಮಿಯಯಲ್ಲಿ ಪರಿಹರಿಸುವುದು ಅಸಾಧ್ಯ

Advertisement

Udayavani is now on Telegram. Click here to join our channel and stay updated with the latest news.

Next