Advertisement

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

01:27 AM Sep 17, 2024 | Team Udayavani |

ಮಂಗಳೂರು: ಬಿ.ಸಿ ರೋಡ್‌ನ‌ಲ್ಲಿ ಹಿಂದೂ ಸಮಾಜವನ್ನು ಕೆಣಕುವ ರೀತಿ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜದಲ್ಲಿ ಶಾಂತಿಭಂಗ ತರಲು ಯತ್ನಿಸಿರುವ ಕಾಂಗ್ರೆಸ್‌ನ ಮಾಜಿ ಪುರಸಭೆ ಅಧ್ಯಕ್ಷರು ಹಾಗೂ ಅವರ ಬೆಂಬಲಿಗರ ವಿರುದ್ದ ನಿರ್ದಾಕ್ಷಿಣ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಆಗ್ರಹಿಸಿದ್ದಾರೆ.

Advertisement

ಹಿಂದೂ ಸಮಾಜಕ್ಕೆ ಸವಾಲು ಹಾಕಿ ರಾಷ್ಟ್ರ ವಿರೋಧಿ ಹಾಗೂ ಜೆಹಾದಿ ರೀತಿಯ ಹೇಳಿಕೆ ನೀಡುವವರ ವಿರುದ್ಧ ಕೇವಲ ಎಫ್‌ಐಆರ್‌ ದಾಖಲಿಸಿದರೆ ಸಾಲದು. ಸಮಾಜದ ಶಾಂತಿ ಕದಡಿ ಕೋಮು ಭಾವನೆ ಕೆರಳಿಸುವುದಕ್ಕೆ ವಿಷಬೀಜ ಬಿತ್ತುವ ಇಂಥ ಮನಃಸ್ಥಿತಿ ಹೊಂದಿದವರನ್ನು ಮುಲಾಜಿಲ್ಲದೆ ಜೈಲಿಗೆ ಅಟ್ಟಬೇಕು.

ಜತೆಗೆ ಇಂಥ ಕೋಮುವಾದಿ ಹೇಳಿಕೆ ಕೊಡಿಸಿ ಹಿಂದೂ ಮುಖಂಡರನ್ನು ಕೆರಳಿಸುವುದರ ಹಿಂದಿರುವ ದುಶಕ್ತಿ ಬಗ್ಗೆ ತನಿಖೆ ನಡೆಸಿ ಅಂಥವರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಪತ್ರಿಕಾ ಹೇಳಿಕೆ ಮೂಲಕ ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next