Advertisement

ಮಂಗಳೂರು: ಬಾಲ್ ತರಲು ಹಾಸ್ಟೆಲ್ ಕಟ್ಟಡದ ಮಹಡಿ ಏರಿದ ವಿದ್ಯಾರ್ಥಿ ಸಾವು

08:04 PM May 04, 2022 | Team Udayavani |

ಮಂಗಳೂರು : ನಗರದ ಕೊಟ್ಟಾರ ಚೌಕಿಯಲ್ಲಿರುವ ಖಾಸಗಿ ಕಾಲೇಜ್ ನ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಆಯತಪ್ಪಿ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ದುರ್ಘಟನೆ ಬುಧವಾರ ಸಂಭವಿಸಿದೆ.

Advertisement

ಪ್ರಣವ್ ಸ ಮುಂಡಾಸ ಎಂಬ 18 ವರ್ಷದ ವಿದ್ಯಾರ್ಥಿ ಮೃತ ದುರ್ದೈವಿಯಾಗಿದ್ದು, ವಿಜಯ ಪುರ ಮೂಲದ ವಿದ್ಯಾರ್ಥಿಯಾಗಿದ್ದಾನೆ.

ಕ್ರಿಕೆಟ್ ಆಡುವ ವೇಳೆ 4 ನೇ ಮಹಡಿಯಲ್ಲಿ ಸಿಕ್ಕಿಕೊಂಡ ಚೆಂಡನ್ನು ತರಲು ಹೋದಾಗ ಆಯ ತಪ್ಪಿ ಬಿದ್ದಿದ್ದಾನೆ ಎಂದು ತಿಳಿದು ಬಂದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಪ್ರಣವ್ ನನ್ನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೆಲನೆ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next