Advertisement

ಮಂಗಳೂರು : ಬಾವಿಗೆ ಹಾರಿ ಖಾಸಗಿ ಶಾಲಾ ಶಿಕ್ಷಕಿ ಆತ್ಮಹತ್ಯೆಗೆ ಶರಣು

04:16 PM Dec 16, 2020 | sudhir |

ಮಂಗಳೂರು : ನಗರದ ಖಾಸಗಿ ಶಾಲಾ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ

Advertisement

ನಗರದ ಖಾಸಗಿ ಶಾಲೆಯ ಶಿಕ್ಷಕಿ ಗ್ರೆಟ್ಟಾ ಗೊಂಸಾಲ್ವಿಸ್ ಅವರು ಬಿಕರ್ಣಕಟ್ಟೆಯಲ್ಲಿರುವ ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಮಾನಸಿಕ ಖನ್ನತೆ ಆತ್ಮಹತ್ಯೆಗೆ ಕಾರಣ ಇರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಬಿಕರ್ಣಕಟ್ಟೆಯ ಸೌಜನ್ಯ ಲೇನ್ ನಲ್ಲಿ ಇವರ ಮನೆ ಇದ್ದು, ಮಂಗಳವಾರ ರಾತ್ರಿ ಊಟ ಮಾಡಿ ಗ್ರೆಟ್ಟಾ ಅವರು ಮಕ್ಕಳ ಜತೆ ಮಲಗಿದ್ದರು. ಆದರೆ ಬುಧವಾರ ಬೆಳಗ್ಗೆ ಮಕ್ಕಳಿಗೆ ಎಚ್ಚರ ಆದಾಗ ತಾಯಿ ಪಕ್ಕದಲ್ಲಿ ಇರಲಿಲ್ಲ. ಬಳಿಕ ಹುಡುಕಾಡಿದಾಗ ಮನೆ ಆವರಣದ ಬಾವಿಯಲ್ಲಿ ಶವ ತೇಲುತ್ತಿತ್ತು.

ಮೃತರು ಗಂಡ ಮತ್ತು ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

 

 

ಮೃತ ಶಿಕ್ಷಕಿಯನ್ನು ಗ್ರೆಟ್ಟಾ ಡಿಸೋಜಾ ಎನ್ನಲಾಗಿದ್ದು. ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next