Advertisement

Mangaluru: ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿದ ಬಸ್ಸಿಗೆ ಕಲ್ಲೆಸೆತ ಪ್ರಕರಣ…

12:44 PM Aug 31, 2024 | Team Udayavani |

ಮಂಗಳೂರು: ಶನಿವಾರ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಬಸ್ಸಿಗೆ ಕಲ್ಲೆಸತ ಪ್ರಕರಣ ಪ್ರತಿಧ್ವನಿಸಿದ್ದು ಸಭೆಯಲ್ಲಿ ಗದ್ದಲ ಉಂಟಾಗಿದೆ.

Advertisement

ಆ.19 ರಂದು ಕಾಂಗ್ರೆಸ್ ಪ್ರತಿಭಟನೆ ವೇಳೆ ಬಸ್ಸಿಗೆ ಕಲ್ಲೆಸೆದಿದ್ದ ಪಾಲಿಕೆ ನಾಮನಿರ್ದೇಶಿತ ಸದಸ್ಯ. ಬಸ್ಸಿಗೆ ಕಲ್ಲೆಸೆದು ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ ವಿಪಕ್ಷ ಕಾಂಗ್ರೆಸ್ ನ ನಾಮನಿರ್ದೇಶಿತ ಸದಸ್ಯ‌ರನ್ನು ಸದನದಿಂದ ಹೊರಗೆ ಹಾಕುವಂತೆ ಆಡಳಿತ ಪಕ್ಷದ ಸದಸ್ಯರು ಆಗ್ರಹಿಸಿದ್ದಾರೆ.

ಈ ವೇಳೆ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ ಅಲ್ಲದೆ ಪ್ರತಿಭಟನೆ ವೇಳೆ ಕೌನ್ಸಿಲ್ ನ ಮೈಕ್ ಗೆ ಹಾನಿಯಾಗಿದೆ, ಇದರಿಂದ ಸಿಟ್ಟಿಗೆದ್ದ ಬಿಜೆಪಿ ಸದಸ್ಯರು ಸದನದಲ್ಲೂ ಗೂಂಡಾ ಪ್ರವೃತ್ತಿ ಮುಂದುವರಿದಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸದನದ ಬಾವಿಗಿಳಿದು ಗದ್ದಲ ನಡೆಸಿ ಮೈಕ್ ಗೆ ಹಾನಿ ಮಾಡಿರುವುದನ್ನು ಮೇಯರ್ ಸುಧೀರ್ ಶೆಟ್ಟಿ ಖಂಡಿಸಿ ಸಭೆಯನ್ನು ಮುಂದೂಡಿದ್ದಾರೆ.

ಇದನ್ನೂ ಓದಿ: WhatsApp ಸ್ಟೇಟಸ್ ಹಾಕಿ ಕಾಲೇಜು ವಿದ್ಯಾರ್ಥಿ ನಾಪತ್ತೆ… ತುಂಗಾ ನದಿ ಬಳಿ ಬೈಕ್ ಪತ್ತೆ

Advertisement

Udayavani is now on Telegram. Click here to join our channel and stay updated with the latest news.

Next