Advertisement

Mangaluru; ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

10:37 PM Dec 09, 2023 | Team Udayavani |

ಮಂಗಳೂರು: ನಗರದ ನಾಗುರಿಯ ರಬ್ಬರ್‌ ತೋಟದಲ್ಲಿ ಕುತ್ತಿಗೆಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸುಮಾರು 30ರಿಂದ 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಮೃತದೇಹ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ.

Advertisement

ಸೊಂಟಕ್ಕೆ ಬಿಳಿ, ಕೆಂಪು, ನೀಲಿ ಗೆರೆಗಳುಳ್ಳ ಟವಲ್‌ ಧರಿಸಿದ್ದರು. 5.5 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡುಮುಖ, ಕಪ್ಪು ತಲೆಕೂದಲು, ಕುರುಚಲು ಗಡ್ಡ ಹೊಂದಿದ್ದಾರೆ.

ವಾರಸುದಾರರು ಇದ್ದರೆ ಕಂಕನಾಡಿ ನಗರ ಪೊಲೀಸ್‌ ಠಾಣೆ (0824-2220529) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next