Advertisement

ಮಂಗಳೂರು: ಮಹಿಳೆಯ ಚಿನ್ನದ‌ ಸರ ಕಸಿದು ಅಪರಿಚಿತ ಪರಾರಿ

02:17 PM Feb 09, 2023 | Team Udayavani |

ಮಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರ ಚಿನ್ನದ‌ ಸರ ಕಸಿದು ಪರಾರಿಯಾದ ಘಟನೆ ನಗರದ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ.

Advertisement

ಮಹಿಳೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿ ಚಿನ್ನದ‌ ಸರ ಕಸಿದು ಪರಾರಿಯಾಗಿದ್ದಾನೆ.

ಫೆ.9 ರ ಗುರುವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ಮಹಿಳೆ‌‌ ವೈದ್ಯರಲ್ಲಿಗೆ ಹೋಗಿ ಮನೆಗೆ ವಾಪಾಸಾಗುತ್ತಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿ ಅವರ ಕುತ್ತಿಗೆಗೆ ಕೈ‌ಹಾಕಿ ಸರ ಕಸಿದು ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಬರ್ಕೆ ಠಾಣಾಧಿಕಾರಿಗಳು ಭೇಟಿ‌‌ ನೀಡಿದ್ದು ಪರಿಶೀಲನೆ‌ ನಡೆಸಿದ್ದಾರೆ. ಚಿನ್ನದ‌ ಸರ ಸುಮಾರು 40 ‌ಗ್ರಾಂ ತೂಕ ವಿತ್ತು ಎಂದು ತಿಳಿದು ಬಂದಿದೆ. ಪ್ರಕರಣ ಇನ್ನಷ್ಟೇ ದಾಖಲಾಗಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next