Advertisement

Mangaluru: ಟಿಪ್ಪರ್‌ ಢಿಕ್ಕಿ; ಕೋಸ್ಟ್‌ಗಾರ್ಡ್‌ ಸಿಬಂದಿಗೆ ಗಂಭೀರ ಗಾಯ

08:08 PM Oct 03, 2024 | Team Udayavani |

ಮಂಗಳೂರು: ಮರವೂರು ಸೇತುವೆ ಬಳಿ ಗುರುವಾರ ಬೆಳಗ್ಗೆ ಟಿಪ್ಪರ್‌ ಢಿಕ್ಕಿ ಹೊಡೆದು ಕೋಸ್ಟ್‌ಗಾರ್ಡ್‌ ಸಿಬಂದಿ ಹರಿಯಾಣ ಮೂಲದ ಭೂಪೇಂದ್ರ ಸಿಂಗ್‌ (37) ಗಂಭೀರ ಗಾಯಗೊಂಡಿದ್ದಾರೆ.

Advertisement

ಕುಂಜತ್ತಬೈಲಿನ ಕೋಸ್ಟ್‌ಗಾರ್ಡ್‌ ವಸತಿಗೃಹದಲ್ಲಿ ವಾಸವಾಗಿದ್ದ ಅವರು ಬೆಳಗ್ಗೆ ಎಂದಿನಂತೆ ವಾಕಿಂಗ್‌ ಹೋಗಿದ್ದಾಗ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಸದ್ಯ ಅವರು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪಣಂಬೂರಿನ ಭಾರತೀಯ ಕೋಸ್ಟ್‌ಗಾರ್ಡ್‌ನಲ್ಲಿ ನಾವಿಕನಾಗಿದ್ದರು. ಮಂಗಳೂರು ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next