Advertisement

Mangaluru; ದ್ವಿಚಕ್ರ ವಾಹನ ಕಳವು ಆರೋಪಿಯ ಬಂಧನ

07:55 PM Aug 23, 2023 | Team Udayavani |

ಮಂಗಳೂರು: ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ತೊಕ್ಕೊಟ್ಟು ಕಾಫಿಕಾಡ್‌ 1ನೇ ಕ್ರಾಸ್‌ ನಿವಾಸಿ ಶನೀಝ್ (23) ಬಂಧಿತ ಆರೋಪಿ. ನಗರದ ಕದ್ರಿ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್‌ ವೆಲ್‌ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈತನಿಂದ ಸುಮಾರು 1.01 ಲ.ರೂ. ಮೌಲ್ಯದ 2 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ನಂಬರ್‌ ಪ್ಲೇಟ್‌ ಇಲ್ಲದೆ ತಿರುಗಾಡುತ್ತಿದ್ದ
ನಗರದ ಪಂಪ್‌ವೆಲ್‌ ಮೇಲ್ಸೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ನಂಬರ್‌ ಪ್ಲೇಟ್‌ ಇಲ್ಲದ ಸ್ಕೂಟರ್‌ನಲ್ಲಿ ಸಂಚರಿಸುತ್ತಿದ್ದವನನ್ನು ವಿಚಾರಣೆಗೊಳಪಡಿಸಿದಾಗ ಈತನ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next