Advertisement

Mangaluru ಉಳಾಯಿಬೆಟ್ಟು ಉದ್ಯಮಿಯ ಮನೆ ದರೋಡೆ ಪ್ರಕರಣ: 8 ಮಂದಿ ಪೊಲೀಸರ ವಶಕ್ಕೆ

12:46 AM Jul 03, 2024 | Team Udayavani |

ಮಂಗಳೂರು: ನಗರದ ಹೊರವಲಯದ ಉಳಾಯಿಬೆಟ್ಟು ಪೆರ್ಮಂಕಿಯ ಉದ್ಯಮಿ ಪದ್ಮನಾಭ ಕೋಟ್ಯಾನ್‌ ಅವರ ಮನೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಕೇರಳದವರು ಸಹಿತ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

Advertisement

ವಶಕ್ಕೆ ಪಡೆದವರಲ್ಲಿ ಸ್ಥಳೀಯರು ಕೂಡ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಪೊಲೀಸರು ಅಧಿಕೃತವಾಗಿ ಹೇಳಿಲ್ಲ.

ಜೂ. 21ರಂದು ರಾತ್ರಿ ಸುಮಾರು ಹತ್ತು ಮಂದಿ ದರೋಡೆಕೋರರು ಮನೆಯವರನ್ನು ಕಟ್ಟಿ ಹಾಕಿ ಚೂರಿಯಿಂದ ಇರಿದು ಒಂದೂವರೆ ಲಕ್ಷ ರೂ ನಗದು, ಚಿನ್ನಾಭರಣ ಸೇರಿದಂತೆ ಸುಮಾರು ಒಂಬತ್ತು ಲ.ರೂ ಮೌಲ್ಯದ ಸೊತ್ತುಗಳನ್ನು ದರೋಡೆ ಮಾಡಿದ್ದರು.

ತೀರಾ ಪರಿಚಿತರದ್ದೇ ಪ್ಲ್ಯಾನ್ ?
ವಶಕ್ಕೆ ಪಡೆದಿರುವವರ ಪೈಕಿ ಉದ್ಯಮಿ ಕೋಟ್ಯಾನ್‌ ಅವರಿಗೆ ತೀರಾ ಪರಿಚಿತರಾಗಿದ್ದವರು ಕೂಡ ಸೇರಿದ್ದಾರೆ ಎಂದು ತಿಳಿದುಬಂದಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next