Advertisement

Mangaluru: ತಿಗಳಾರಿ ಲಿಪಿಗೆ ಯುನಿಕೋಡ್‌ ಅನುಮೋದನೆ: ತಾರಾನಾಥ ಗಟ್ಟಿ

12:50 AM Sep 12, 2024 | Team Udayavani |

ಮಂಗಳೂರು: ತುಳು ತಿಗಳಾರಿ ಲಿಪಿಗೆ ಯುನಿಕೋಡ್‌ ಅನುಮೋದನೆ ನೀಡಲಾಗಿದೆ. ಸಂಶೋಧಕಿ ವೈಷ್ಣವಿ ಮೂರ್ತಿ ಹಾಗೂ ವಿನೋದ್‌ ರಾಜನ್‌ ಅವರು ದಾಖಲೆ ಸಮೇತ ಸಲ್ಲಿಸಿದ ಪ್ರಸ್ತಾವನೆಗೆ ಈ ಅನುಮೋದನೆ ನೀಡಿರುವುದಾಗಿ ಯುನಿಕೋಡ್‌ ತನ್ನ ಅಂತರ್ಜಾಲ ಮಾಹಿತಿಯಲ್ಲಿ ಉಲ್ಲೇಖೀಸಿದೆ. ಸಾಕಷ್ಟು ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಿದ ಪ್ರಸ್ತಾವನೆಯ ಹಿಂದೆ ಅವರ ಪರಿಶ್ರಮ ಇದೆ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್‌ ತಿಳಿಸಿದ್ದಾರೆ.

Advertisement

ಯುನಿಕೋಡ್‌ನ‌ಲ್ಲಿ ತುಳುವನ್ನು ಮಾತ್ರ ಉಲ್ಲೇಖೀಸಿ ಪ್ರತ್ಯೇಕವಾಗಿ ತುಳು ಎಂದಷ್ಟೇ ಉಲ್ಲೇಖೀಸಿ ಅನುಮೋದನೆ ನೀಡಬೇಕೆಂಬ ಬೇಡಿಕೆಗೆ ಅಕಾಡೆಮಿಯ ಸಹಕಾರ ಇದೆ. ತುಳು-ತಿಗಳಾರಿ ನಡುವಿನ ಸಾಮ್ಯತೆ, ವ್ಯತ್ಯಾಸದ ಬಗ್ಗೆ ಭಾಷಾ ಪಂಡಿತರು, ಲಿಪಿ ತಜ್ಞರು ಈಗಾಗಲೇ ಸಾಕಷ್ಟು ಬರೆದಿದ್ದಾರೆ. ಇದನ್ನೂ ಗಮನದಲ್ಲಿರಿಸಿಕೊಳ್ಳುವುದು ಸೂಕ್ತ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next