Advertisement

Mangaluru; ಎಸ್.ಸಿ, ಎಸ್.ಟಿ ಮೀಸಲು ಅನುದಾನ ಗ್ಯಾರಂಟಿಗೆ ಬಳಕೆ: ಬಿಜೆಪಿ ಪ್ರತಿಭಟನೆ

11:46 AM Feb 26, 2024 | Team Udayavani |

ಮಂಗಳೂರು: ದಲಿತ ಸಮುದಾಯದ ವಿವಿಧ ಯೋಜನೆಗಳಿಗೆ ಮೀಸಲಿಟ್ಟ ಅನುದಾನವನ್ನು ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿ ದಲಿತರಿಗೆ ಅನ್ಯಾಯವೆಸಗಿದೆ ಎಂದು ಆರೋಪಿಸಿ ದ.ಕನ್ನಡ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾ ವತಿಯಿಂದ ಇಂದು‌ ಮಂಗಳೂರು ನಗರದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಯಿತು.

Advertisement

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಮಾತನಾಡಿ, ಕಾಂಗ್ರೆಸ್ ಸರಕಾರ ದಲಿತ ವಿರೋಧಿ ನೀತಿಗಳನ್ನು ಅನುಸರಿಸುತ್ತಾ ಬಂದಿದೆ. ಅಲ್ಪಸಂಖ್ಯಾಕರಿಗೆ 10,000 ಕೋ.ರೂ. ನೀಡುವ ಸರಕಾರ ದಲಿತರಿಗೆ ಮೀಸಲಿಟ್ಟ 11,000 ಕೋಟಿ ರೂ.ಗಳನ್ನು ಗ್ಯಾರಂಟಿಗೆ ಬಳಸುತ್ತಿದೆ. ಅತ್ತ ಗ್ಯಾರಂಟಿ ಯೋಜನೆಗಳು ಕೂಡ ಸಮರ್ಪಕವಾಗಿ ಜಾರಿಗೊಳ್ಳುತ್ತಿಲ್ಲ ಎಂದರು.

ಎಸ್ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಜಗನ್ನಾಥ ಬೆಳುವಾಯಿ, ಬಿಜೆಪಿ ಜಿಲ್ಲಾ  ಪ್ರಧಾನ ಕಾರ್ಯದರ್ಶಿ ಕಿಶೋರ್ ಬೊಟ್ಯಾಡಿ, ಪ್ರಮುಖರಾದ ವಿಕಾಸ್ ಪುತ್ತೂರು, ಮಂಜುಳಾ ರಾವ್, ನಿತಿನ್ ಕುಮಾರ್, ಪೂಜಾ ಪೈ, ಎಸ್ ಸಿ ಮೋರ್ಚಾ ಮಾಜಿ ಜಿಲ್ಲಾಧ್ಯಕ್ಷ ವಿನಯ ನೇತ್ರ ದಡ್ಡಲಕಾಡು ಮೊದಲಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next