Advertisement

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

02:00 AM Sep 13, 2024 | Team Udayavani |

ಮಂಗಳೂರು: ವಿರಾಟ್‌ ಹಿಂದೂಸ್ಥಾನ್‌ ಸಂಗಮ್‌ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ಡಾ| ಸುಬ್ರಮಣಿಯನ್‌ ಸ್ವಾಮಿ ಅವರು ಸೆ.13ರಂದು ರಾತ್ರಿ ಮಂಗಳೂರಿಗೆ ಆಗಮಿಸಲಿದ್ದಾರೆ.

Advertisement

ಅಂದು ಸಂಜೆ ದಿಲ್ಲಿಯಿಂದ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ.14ರಂದು ಬೆಳಗ್ಗೆ 8 ಗಂಟೆಗೆ ರಸ್ತೆ ಮಾರ್ಗವಾಗಿ ಶೃಂಗೇರಿಗೆ ತೆರಳಲಿದ್ದಾರೆ. ಸೆ. 14 ಮತ್ತು 15ರಂದು ಅವರ 85ನೇ ವರ್ಷದ ಜನ್ಮದಿನಾಚರಣೆ ಹಾಗೂ ವಿಎಚ್‌ಎಸ್‌ ಪ್ರತಿನಿಧಿಗಳ ಸಮಾವೇಶ ಶೃಂಗೇರಿಯ ಅಭಿನವ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಡಾ| ಸ್ವಾಮಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಎರಡು ದಿನಗಳಲ್ಲಿ ಬೆಳಗ್ಗೆ ಡಾ| ಸ್ವಾಮಿ ಶೃಂಗೇರಿ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಸೆ.15 ರಂದು ಮಧ್ಯಾಹ್ನ 3 ಗಂಟೆಗೆ ಶೃಂಗೇರಿಯಿಂದ ನಿರ್ಗಮಿಸಲಿದ್ದು, ರಾತ್ರಿ 8 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದಿಲ್ಲಿಗೆ ಮರಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next