Advertisement

Mangaluru ಯುವನಿಧಿ ಯೋಜನೆ: ಜ. 8-9ರಂದು ನೋಂದಣಿ ಮೇಳ

11:23 PM Jan 05, 2024 | Team Udayavani |

ಮಂಗಳೂರು: ಪದವೀಧರರಿಗೆ ಮತ್ತು ಡಿಪ್ಲೊಮಾ ಪಡೆದಿರುವವರಿಗೆ ರಾಜ್ಯಸರಕಾರದ ಯುವನಿಧಿ ಯೋಜನೆಯ ನೋಂದಣಿ ತೀವ್ರಗೊಳಿಸಲು ಜಿಲ್ಲಾಧಿಕಾರಿ ಎಂ.ಪಿ. ಮುಲ್ಲೈ ಮುಗಿಲನ್‌ ಸೂಚಿಸಿದ್ದಾರೆ.

Advertisement

ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಅವರು, ಜಿಲ್ಲೆಯ ಎಲ್ಲ ಪದವಿ ಕಾಲೇಜು ಹಾಗೂ ಡಿಪ್ಲೊಮಾ ಶಿಕ್ಷಣ ಸಂಸ್ಥೆಗಳಲ್ಲಿ ಜ. 8 ಮತ್ತು 9ರಂದು ನೋಂದ‌ಣಿ ಮೇಳವನ್ನು ನಡೆಸಲು ತಿಳಿಸಿದರು. 2023ರಲ್ಲಿ ಪದವಿ, ಡಿಪ್ಲೊಮಾ ಪಡೆದವರು ಇದಕ್ಕೆ ಅರ್ಹರಾಗಿದ್ದಾರೆ.

ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಪ್ರದೀಪ್‌ ಡಿ’ಸೋಜಾ, ಮಂಗಳೂರು ವಿ.ವಿ. ಪ್ರಾಧ್ಯಾಪಕ ಡಾ| ಎ.ಎಂ. ಖಾನ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next