Advertisement

ಮಂಗಳೂರು:ಹಾಡಹಗಲೆ ಮನೆಗೆ ನುಗ್ಗಿ ಮಹಿಳೆಯ ಹತ್ಯೆ,ದರೋಡೆ

05:10 PM Dec 30, 2017 | |

ಮಂಗಳೂರು: ತಾಲೂಕಿನ ಕಿನ್ನಿಗೋಳಿಯ ಐಕಳ ಎಂಬಲ್ಲಿ ಶನಿವಾರ ಹಾಡ ಹಗಲೇ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಹತ್ಯೆಗೈದು ಕುತ್ತಿಗೆ ಮತ್ತು ಕೈಯಲ್ಲಿರುವ ಬಂಗಾರದ ಅಭರಣಗಳನ್ನು ದರೋಡೆ ನಡೆಸಿದ ಆತಂಕಕಾರಿ ಘಟನೆ ನಡೆದಿದೆ. 

Advertisement

 ಸದಾಂಶು ಶೆಟ್ಟಿ ಅವರ  ಮನೆಗೆ ನುಗ್ಗಿದ ದುಷ್ಕರ್ಮಿಗಳು  ಮನೆಯಲ್ಲಿ ಒಬ್ಬರೇ ಇದ್ದ ಅವರ ಪತ್ನಿ ವಸಂತಿ (58) ಅವರನ್ನು ಚೂರಿಯಿಂದ ಇರಿದು ಹತ್ಯೆಗೈದಿರುವುದಾಗಿ  ವರದಿಯಾಗಿದೆ. 

ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಬಳಿಕ ವಸಂತಿ ಅವರು ಪತಿ ಗೆ ಕರೆ ಮಾಡಿ ವಿಚಾರ ತಿಳಿಸಿ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. 

ಮೂಲ್ಕಿ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಚುರುಕುಗೊಳಿಸಿದ್ದಾರೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next