Advertisement

Waste disposal: ರಾ.ಹೆದ್ದಾರಿ ಬದಿ ಕಸ ಎಸೆಯುತ್ತಿದ್ದ ವಾಹನ ತಡೆದು ದಂಡ ವಿಧಿಸಿದ ಪಂಚಾಯತ್

02:18 PM Sep 21, 2023 | Team Udayavani |

ವಿಟ್ಲ: ಸ್ವಚ್ಛತೆ ಬಗ್ಗೆ ಎಷ್ಟು ತಿಳಿ ಹೇಳಿದರೂ ನಾಗರಿಕರು ಅದನ್ನು ಅರ್ಥ ಮಾಡಿಕೊಳ್ಳದೇ ಎಲ್ಲೆಂದರಲ್ಲಿ ಕಸ ಬಿಸಾಡುವುದು ಈಗಲೂ ಕಾಣಬಹುದು. ಅಂತದ್ದೇ ಒಂದು ಸನ್ನಿವೇಶ ಮಾಣಿ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ತ್ಯಾಜ್ಯ ಎಸೆಯುತ್ತಿದ್ದ ವಾಹನವೊಂದನ್ನು ತಡೆದು ನಿಲ್ಲಿಸಿದ ಘಟನೆ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಮೈಸೂರು ರಸ್ತೆಯಲ್ಲಿ ನಡೆದಿದೆ

ಹೆದ್ದಾರಿಯ ಬದಿಯಲ್ಲಿ ತ್ಯಾಜ್ಯ ಎಸೆಯುತ್ತಿದ್ದ ವಾಹನವೊಂದನ್ನು ತಡೆದು ನಿಲ್ಲಿಸಿ, ಎಸೆದ ತ್ಯಾಜ್ಯವನ್ನು ಮತ್ತೆ ಅದೇ ವಾಹನಕ್ಕೆ ಹಾಕಿಸಿ, ವಾಹನ ಚಾಲಕನಿಗೆ ಮಾಣಿ ಪಂಚಾಯತ್ ವತಿಯಿಂದ ದಂಡ ವಿಧಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next