Advertisement

Mani: 3.50 ಲಕ್ಷಾಂತರ ರೂ.ಮೌಲ್ಯದ ಸಾಮಗ್ರಿ ಕಳವು

10:27 PM Aug 08, 2023 | Team Udayavani |

ವಿಟ್ಲ: ಮಾಣಿಯಲ್ಲಿ ಬ್ರಿಡ್ಜ್ ಕೆಲಸಕ್ಕೆ ತಂದಿಟ್ಟಿದ್ದ ರಾಡುಗಳು, ಪ್ಲೇಟ್ಸ್‌ ಹಾಗೂ ಇತರ ಸಾಮಗ್ರಿಗಳು ಕಳ್ಳತನವಾಗಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಬಂಟ್ವಾಳ ಬಿ ಮೂಡ ಗ್ರಾಮದ ನಿವಾಸಿ, ಕೆ.ಎನ್‌.ಆರ್‌. ಕನ್‌ಸ್ಟ್ರಕ್ಷನ್‌ ಕಂಪೆನಿಯಲ್ಲಿ ಪಿಆರ್‌ಒ ಆಗಿ ಕೆಲಸ ನಿರ್ವಹಿಸುತ್ತಿರುವ ಆರ್‌. ನಂದಕುಮಾರ್‌ ಠಾಣೆಗೆ ದೂರು ನೀಡಿದ್ದಾರೆ.

ಮಾಣಿ ಎಂಬಲ್ಲಿ ಬ್ರಿಡ್ಜ್ ಕೆಲಸ ಮಾಡಲು ತಂದಿಟ್ಟಿದ್ದ ರಾಡುಗಳು, ಪ್ಲೇಟ್ಸ್‌ ಹಾಗೂ ಇತರ ಸಾಮಗ್ರಿಗಳು ಆ. 7ರಂದು ನೋಡಿದಾಗ ಕಳ್ಳತನವಾಗಿತ್ತು. ಸಾಮಗ್ರಿಗಳನ್ನು ಹುಡುಕಾಡಿದಾಗ ಮಾಣಿ ಗ್ರಾಮದ ಪಟ್ಲಕೋಡಿ ಎಂಬಲ್ಲಿ ಈಚರ್‌ ವಾಹನದಲ್ಲಿ ವ್ಯಕ್ತಿಯೋರ್ವ ತುಂಬಿಸಿಕೊಂಡಿರುವುದು ಕಂಡು ಬಂತು.

ನಂದಕುಮಾರ್‌ ಅವರನ್ನು ಗಮನಿಸಿದ ಆರೋಪಿ ವಾಹನವನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಕಳ್ಳತನವಾದ ಸಾಮಗ್ರಿಗಳು 5 ಟನ್‌ಗಳಾಗಿದ್ದು ಅಂದಾಜು ಮೌಲ್ಯ 3,50,000 ರೂ. ಆಗಿರಬಹುದು ಎಂದು ಅಂದಾಜಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next