Advertisement

ಮಾಣಿ: ರಸ್ತೆ ಹೊಂಡಕ್ಕೆ ಬಸ್ -ಸಂಚಾರಕ್ಕೆ ಅಡಚಣೆ

01:49 PM Sep 14, 2019 | Naveen |

ವಿಟ್ಲ: ಬೆಂಗಳೂರು ಕಡೆಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ರಸ್ತೆ ಹೊಂಡಕ್ಕೆ ಸಿಕ್ಕಿಹಾಕಿಕೊಂಡ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ.

Advertisement

ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು, ಬೆಳಗ್ಗೆ ಹೊಂಡದಲ್ಲಿ ಬಸ್ ಸಿಲುಕಿದೆ. ಇದರಿಂದ ಘನ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ 2 ತಾಸುಗಳ ವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರು ರಸ್ತೆಯಲ್ಲಿ ಕಾಲಕಳೆಯುವಂತಾಯಿತು. ಬಳಿಕ ಉಪ್ಪಿನಂಗಡಿಯಿಂದ ಕ್ರೇನ್ ತರಿಸಿ ಬಸ್ಸನ್ನು ಬದಿಗೆ ಸರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next