Advertisement

ಮಾಣಿ: ಕಾರು- ಲಾರಿ ನಡುವೆ ಅಪಘಾತ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತ

04:20 PM Apr 19, 2022 | Team Udayavani |

ವಿಟ್ಲ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ.

Advertisement

ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ ಮಾಣಿ ಕಡೆಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ‌ ಹೊಡೆದಿದೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಆದರೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನಗಳು ರಸ್ತೆಯಲ್ಲಿ ನಿಂತ ಪರಿಣಾಮ ಕೆಲ ಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರು ಬಂದು ವಾಹನಗಳನ್ನು ತೆರವುಗೊಳಿಸಿದ್ದಾರೆ.

ಇಂದು ಬೆಳಿಗ್ಗೆ ನಡೆದ ಬಸ್, ಲಾರಿ, ಕಾರು ನಡುವಿನ ಸರಣಿ ಅಪಘಾತದಲ್ಲಿ ಸುಮಾರು ಮೂರು ಗಂಟೆಗಳ ತನಕ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಅಡಚಣೆ ಉಂಟಾಗಿದ್ದರಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರು.

ಇದನ್ನೂ ಓದಿ :ಹಾಸನ: ಹಿಮ್ಸ್‌ ಆಸ್ಪತ್ರೆಯಲ್ಲಿ ಒಂದೇ ದಿನ ಮೂರು ನವಜಾತ ಶಿಶುಗಳ ಸಾವು

Advertisement

Udayavani is now on Telegram. Click here to join our channel and stay updated with the latest news.

Next