Advertisement
ಇದೀಗ ಶಾಲೆ ಪುನರಾರಂಭಗೊಂಡಿದೆ. ಮಳೆರಾಯನ ಅಬ್ಬರವೂ ಜೋರಾಗಿದೆ. ಇದರಿಂದ ಮತ್ತೆ ಮಕ್ಕಳಿಗೆ ಪಾಠ ಕೇಳಲು ಸಮಸ್ಯೆಯಾಗಿದೆ.
Related Articles
Advertisement
ಈ ಶಾಲೆಯ ಅವಸ್ಥೆಯ ಬಗ್ಗೆ ಶಿಕ್ಷಣ ಇಲಾಖೆಗೂ, ಜನಪ್ರತಿನಿಧಿಗಳ ಗಮನಕ್ಕೆ ಕಳೆದ ಶೈಕ್ಷಣಿಕ ವರ್ಷದಲ್ಲೇ ತರಲಾಗಿದೆ. ಕಳೆದ ಐದು ವರ್ಷಗಳಿಂದ ಈ ಶಾಲೆ ಅಪಾಯದ ಎಚ್ಚರಿಕೆ ಕೊಡುತ್ತಲೇ ಇದೆ. ಪೋಷಕರು ನಿತ್ಯವೂ ಆತಂಕ, ದುಗುಡ, ದುಮ್ಮಾನಗಳ ನಡುವೆಯೇ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿದ್ದಾರೆ. ನಮ್ಮ ಮಕ್ಕಳ ಜೀವಕ್ಕೆ ಬೆಲೆಯಿಲ್ಲವೇ ಎಂದು ಪೋಷಕರು ಪ್ರಶ್ನಿಸಿ ಕೂಡಲೇ ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿದ್ದಾರೆ. ತರಗತಿ ಕೋಣೆ ಬಂದ್ ಅಪಾಯದ ಮುನ್ಸೂಚನೆಯ ಕಾರಣಕ್ಕೆ ಶಾಲೆಯ ಎಲ್ಲ ತರಗತಿ ಕೋಣೆಯನ್ನು ಬಂದ್ ಮಾಡಲಾಗಿದೆ. ನಲಿಕಲಿ ಕೊಠಡಿ ಹಾಗೂ ರಂಗ ಮಂದಿರದಲ್ಲಿ ಮಕ್ಕಳು ಪಾಠ ಕೇಳುತ್ತಿದ್ದಾರೆ.
ಭಕ್ತಕೋಡಿ ಶಾಲೆಯಲ್ಲೂ ಸಮಸ್ಯೆ
ಸರ್ವೆ ಗ್ರಾಮದ ಭಕ್ತಕೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಈ ಬಾರಿ 15 ಮಕ್ಕಳು ಒಂದನೇ ತರಗತಿ ದಾಖಲಾಗಿದ್ದಾರೆ. ಕೊಠಡಿ ಸಮಸ್ಯೆಗಳಿಂದ 1,2,3 ನೇ ತರಗತಿಗಳು ಒಂದು ಕೊಠಡಿಯಲ್ಲಿ, 3,4,5ನೇ ತರಗತಿಗಳು ಒಂದೇ ಕೊಠಡಿ ಯಲ್ಲಿ ಹಾಗೂ 6,7ನೇ ತರಗತಿಗಳು ಬೇರೆ ಬೇರೆ ಕೊಠಡಿಗಳಲ್ಲಿ ನಡೆಯಲಿದೆ.ಕಳೆದ ವರ್ಷವೇ ಶಾಲೆಗೆ ಅಗತ್ಯವಿರುವ ಕೊಠಡಿಗಳನ್ನು ಒದಗಿಸುವಂತೆ ಮನವಿ ಮಾಡಿದ್ದೆವು. ಈ ಬಾರಿ ಮಳೆಯ ನಡುವೆ ಶೈಕ್ಷಣಿಕ ವರ್ಷ ಆರಂಭವಾಗಿದೆ. ಸಮಸ್ಯೆ ಹಾಗೆಯೇ ಇದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ ಕೈಪಂಗಳ ಹೇಳಿದ್ದಾರೆ.
ಅಪಾಯ ಕಟ್ಟಿಟ್ಟ ಬುತ್ತಿ
ಮಣಿಕ್ಕರ ಶಾಲೆಯ ಪೋಷಕರ ಅಳಲನ್ನು ಜನಪ್ರತಿನಿಧಿಗಳು, ಅಧಿಕಾರಿಗಳು ಪುರಸ್ಕರಿಸದೇ ಇದ್ದಲ್ಲಿ ಶಾಲೆಯಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. –ರಹಿಮಾನ್, ಅಧ್ಯಕ್ಷರು, ಶಾಲಾಭಿವೃದ್ಧಿ ಸಮಿತಿ