Advertisement

Manipal; ತೋಡಿಗೆ ಬಿದ್ದು ವ್ಯಕ್ತಿ ಸಾವು

10:44 PM Mar 05, 2024 | Team Udayavani |

ಮಣಿಪಾಲ: ಅನಾರೋಗ್ಯದಿಂದ ಬಳಲುತ್ತಿದ್ದ 80 ಬಡಗಬೆಟ್ಟುವಿನ ಭಾಸ್ಕರ (67) ಅವರು ತೋಡಿಗೆ ಬಿದ್ದು ಮೃತಪಟ್ಟ ಘಟನೆ ಸಂಭವಿಸಿದೆ.

Advertisement

ಲಿವರ್‌ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಮಾ. 4ರಂದು ರಾತ್ರಿ ಊಟ ಮಾಡಿ ಮಲಗಿದ್ದು, ಮರುದಿನ ನೋಡಿದಾಗ ಸ್ಥಳದಲ್ಲಿರಲಿಲ್ಲ. ಅನಂತರ ಸ್ಥಳೀಯರೊಬ್ಬರು ಭಾಸ್ಕರ ಅವರು ತೋಡಿನಲ್ಲಿ ಬಿದ್ದಿರುವ ವಿಷಯ ತಿಳಿಸಿದರು.

ಕೂಡಲೇ ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ವೈದ್ಯರು ಪರೀಕ್ಷಿಸಿ ಸಾವನ್ನಪ್ಪಿರುವುದಾಗಿ ತಿಳಿಸಿದರು.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next