Advertisement

ಜಿ. ಶಂಕರ್‌ ಮಣಿಪಾಲ ಆರೋಗ್ಯ ಕಾರ್ಡ್‌ಗಳ ನೋಂದಣಿ ಆರಂಭ

12:17 AM Jan 16, 2023 | Team Udayavani |

ಉಡುಪಿ: ಜಿ. ಶಂಕರ್‌ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆ – 2023 ನೋಂದಣಿ ಕಾರ್ಯ ಆರಂಭಗೊಂಡಿದೆ.

Advertisement

ಅಂಬಲಪಾಡಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕರಾದ ಜಿ. ಶಂಕರ್‌ ಅವರು ಕಸ್ತೂರ್ಬಾ ಆಸ್ಪತ್ರೆ ಮತ್ತು ಮಾಹೆ ಮಣಿಪಾಲ ಸಹಕಾರದೊಂದಿಗೆ ರೂಪಿಸಲಾದ ಜಿ. ಶಂಕರ್‌ ಮಣಿಪಾಲ್‌ ಆರೋಗ್ಯ ಸುರಕ್ಷಾ ಕಾರ್ಡ್‌ ಯೋಜನೆ ಇದಾಗಿದೆ. ಎಲ್ಲ ಬಡ ಜನರ ಆರೋಗ್ಯ ಸುರಕ್ಷೆಗಾಗಿ ಹಮ್ಮಿಕೊಂಡ ಈ ಕಾರ್ಡ್‌ಗಳನ್ನು ಮೊಗವೀರ ಯುವ ಸಂಘಟನೆ ಉಡುಪಿ ಹಾಗೂ ಇದರ ಘಟಕಗಳ ಮೂಲಕ ನೋಂದಣಿ ಮಾಡಿ ವಿತರಿಸಲಾಗುವುದು. ಈ ಯೋಜನೆಯು ಮಣಿಪಾಲ ಸಮೂಹ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಜನರಲ್‌ ವಾರ್ಡ್‌ಗಳಿಗೆ ಒಳರೋಗಿಗಳಾಗಿ ದಾಖಲಾತಿ ಪಡೆಯುವ ಯಾವುದೇ ಕಾಯಿಲೆಗಳ ರೋಗಿಯ ಆಸ್ಪತ್ರೆಯ ಒಟ್ಟು ಬಿಲ್‌ ಮೊತ್ತದಲ್ಲಿ ಶೇ. 35 ರಿಯಾಯಿತಿ ಸವಲತ್ತು ಹೊಂದಿದೆ.

ಕೆಎಂಸಿ ಆಸ್ಪತ್ರೆ ಮಣಿಪಾಲ, ಅತ್ತಾವರ
ತಜ್ಞ ಅಥವಾ ಸೂಪರ್‌ ಸ್ಪೆಷಾಲಿಸ್ಟ್‌ ವೈದ್ಯರ ಸಮಾಲೋಚನೆಯಲ್ಲಿ ಶೇ.50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.30 ರಿಯಾಯಿತಿ, ಸಿಟಿ, ಎಂಆರ್‌ಐ, ಅಲ್ಟ್ರಾ ಸೌಂಡ್‌ಗಳಲ್ಲಿ ಶೇ. 20 ರಿಯಾಯಿತಿ, ಹೊರರೋಗಿ ವಿಭಾಗಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20 ರಿಯಾಯಿತಿ, ಔಷಧಾಲಯಗಳಲ್ಲಿ ಶೇ.12ರ ವರೆಗೆ ರಿಯಾಯಿತಿ.

ಟಿಎಂಎ ಪೈ ಆಸ್ಪತ್ರೆ ಉಡುಪಿ/ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ
ತಜ್ಞ ಅಥವಾ ಸೂಪರ್‌ ಸ್ಪೆಷಾಲಿಸ್ಟ್‌ ವೈದ್ಯರ ಸಮಾಲೋಚನೆಯಲ್ಲಿ ಶೇ. 20 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ. 20 ರಿಯಾಯಿತಿ, ಸಿಟಿ, ಎಂಆರ್‌ಐ, ಅಲ್ಟ್ರಾ ಸೌಂಡ್‌ಗಳಲ್ಲಿ ಶೇ. 20 ರಿಯಾಯಿತಿ, ಹೊರರೋಗಿ ವಿಭಾಗಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ. 20 ರಿಯಾಯಿತಿ, ಔಷಧಾಲಯಗಳಲ್ಲಿ ಶೇ.10ರವರೆಗೆ ರಿಯಾಯಿತಿ.

ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು
ತಜ್ಞ ಅಥವಾ ಸೂಪರ್‌ ಸ್ಪೆಷಾಲಿಸ್ಟ್‌ ವೈದ್ಯರ ಸಮಾಲೋಚನೆಯಲ್ಲಿ ಶೇ.50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.20 ರಿಯಾಯಿತಿ, ಸಿಟಿ, ಎಂಆರ್‌ಐ, ಅಲ್ಟ್ರಾ ಸೌಂಡ್‌ಗಳಲ್ಲಿ ಶೇ.20 ರಿಯಾಯಿತಿ, ಹೊರರೋಗಿ ವಿಭಾಗಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20 ರಿಯಾಯಿತಿ, ಔಷಧಾಲಯಗಳಲ್ಲಿ ಶೇ. 10ರ ವರೆಗೆ ರಿಯಾಯಿತಿ.

Advertisement

ಯಾವುದೇ ಷರತ್ತುಗಳಿಲ್ಲದೆ ಎಲ್ಲರಿಗೂ ಹೊಸದಾಗಿ ಕಾರ್ಡ್‌ ಪಡೆಯಲು ಈ ಯೋಜನೆಯಲ್ಲಿ ಅವಕಾಶವಿದೆ. ಈ ಹಿಂದೆ ಜಿ. ಶಂಕರ್‌ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್‌ ಹೊಂದಿದ್ದ ಯಾವುದೇ ಕುಟುಂಬ/ಸದಸ್ಯರೂ ಹೊಸ ಕಾರ್ಡ್‌ ಪಡೆಯಬಹುದಾಗಿದೆ. ನೋಂದಣಿಗೆ ಒಳಪಡುವ ಎಲ್ಲ ಸದಸ್ಯರ ಆಧಾರ್‌ ಕಾರ್ಡ್‌ ಮತ್ತು ಕುಟುಂಬದ ರೇಷನ್‌ ಕಾರ್ಡ್‌ ಪ್ರತಿಯೊಂದಿಗೆ ಜ.17ರಿಂದ 31ರ ಒಳಗೆ ಮೊಗವೀರ ಯುವ ಸಂಘಟನೆಯ ಜಿಲ್ಲಾ ಕಚೇರಿ, ಮಾಧವ ಮಂಗಲ ಸಮುದಾಯ ಭವನ, ಶ್ಯಾಮಿಲಿ ಸಭಾಂಗಣ ಅಂಬಲಪಾಡಿ ಅಥವಾ ಮೊಗವೀರ ಯುವ ಸಂಘಟನೆಯ ಘಟಕಗಳನ್ನು ಸಂಪರ್ಕಿಸಿ ಈ ಯೋಜನೆಯನ್ನು ನೋಂದಾಯಿಸಿಕೊಂಡು ಸೌಲಭ್ಯ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ದೂ.ಸಂ.: 0820-2532099 ಸಂಪರ್ಕಿಸಬಹುದು ಎಂದು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜೇಂದ್ರ ಹಿರಿಯಡ್ಕ ತಿಳಿಸಿದ್ದಾರೆ.

ಒಂದು ಕುಟುಂಬ ಅಥವಾ ಕುಟುಂಬದ ಸದಸ್ಯರು ಯಾವುದೇ ಒಂದು ಘಟಕದಲ್ಲಿ ರಿಯಾಯಿತಿ ಸೌಲಭ್ಯ ಯೋಜನೆಯನ್ನು ನೋಂದಾಯಿಸಿಕೊಳ್ಳಬಹುದು. ಒಂದಕ್ಕಿಂತ ಹೆಚ್ಚು ಘಟಕಗಳಲ್ಲಿ ನೋಂದಾಯಿಸಿಕೊಂಡರೆ ಅಂತಹ ವ್ಯಕ್ತಿಯ ಅಥವಾ ಕುಟುಂಬದ ರಿಯಾಯಿತಿ ಸೌಲಭ್ಯ ಯೋಜನೆಯ ಸದಸ್ಯತ್ವವನ್ನು ರದ್ದುಪಡಿಸಲಾಗುವುದು. ಈ ಯೋಜನೆಯ ಸವಲತ್ತುಗಳು ಜನರಲ್‌ ವಾರ್ಡ್‌ ಗಳಿಗೆ ಮಾತ್ರ ಸೀಮಿತವಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next