Advertisement

Manipal: ವ್ಯಕ್ತಿಯ ಮೇಲೆ ಹಲ್ಲೆ, ಜೀವ ಬೆದರಿಕೆ: ಪ್ರಕರಣ ದಾಖಲು

08:38 PM Oct 01, 2024 | Team Udayavani |

ಮಣಿಪಾಲ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿದ ಘಟನೆ ನಡೆದಿದೆ.

Advertisement

ಕಕ್ಕುಂಜೆ ನಿವಾಸಿ ಗಣೇಶ್‌ ಅವರು ಕಕ್ಕುಂಜೆ ಶಾಲೆಯ ಬಳಿ ಸ್ಕೂಟರ್‌ನಲ್ಲಿ ಬರುತ್ತಿದ್ದಾಗ ಅವರ ಪಕ್ಕದ ಮನೆಯ ಪ್ರವೀಣ್‌ ಎಂಬಾತ ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ಆತನ ಕೈಯಲ್ಲಿದ್ದ ಹಾಕಿ ಸ್ಟಿಕ್‌ನಿಂದ ಗಣೇಶ್‌ ಅವರ ತಲೆ ಹಾಗೂ ಎಡಕೈಗೆ ಹೊಡೆದಿದ್ದಾನೆ. ಬಳಿಕ ಕೈಯಿಂದ ಕೆನ್ನೆಗೆ ಹೊಡೆದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬಳಿಕ ಗಣೇಶ್‌ ಅವರನ್ನು ಅವರ ಸ್ನೇಹಿತ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next