Advertisement

‘Manipal ಜ್ಞಾನಸುಧಾ’ ಪದವಿಪೂರ್ವ ಕಾಲೇಜು: ಅರ್ಹರಿಗೆ ಉಚಿತ ಪ್ರವೇಶ

12:09 AM May 10, 2024 | Team Udayavani |

ಕಾರ್ಕಳ: ಅಜೆಕಾರು ಪದ್ಮಗೋಪಾಲ್‌ ಎಜುಕೇಶನ್‌ ಟ್ರಸ್ಟ್‌ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿಲಾಷೆಗೆ ನೀರೆರೆದು ಪೋಷಿಸುತ್ತ ಬಂದಿದೆ. ಈ ನಿಟ್ಟಿನಲ್ಲಿ ಹೊಸ ಹೆಜ್ಜೆಯನ್ನಿಟ್ಟು ಮುಂದೆ ಸಾಗುತ್ತ ಮಣಿಪಾಲದ ವಿದ್ಯಾನಗರದಲ್ಲಿ “ಮಣಿಪಾಲ ಜ್ಞಾನಸುಧಾ’ ಎಂಬ ನೂತನ ಪದವಿಪೂರ್ವ ಕಾಲೇಜನ್ನು ಆರಂಭಿಸಿದ್ದು 2024-25ನೇ ಶೈಕ್ಷಣಿಕ ವರ್ಷದಿಂದ ಕಾರ್ಯನಿರ್ವಹಿಸಲಿದೆ.

Advertisement

ಈ ಕಾಲೇಜಿನಲ್ಲಿ ವಾಣಿಜ್ಯ ವಿಭಾಗಕ್ಕೆ ಸೇರಲ್ಪಡುವ ಅರ್ಹ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಮತ್ತು ಶೇ. 50 ಶುಲ್ಕ ವಿನಾಯಿತಿಯೊಂದಿಗೆ ಶಿಕ್ಷಣವನ್ನು ನೀಡಲಿದ್ದು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವಿಜ್ಞಾನ ವಿಭಾಗದಲ್ಲಿ ಪಿಸಿಎಂಬಿ, ಪಿಸಿಎಂಸಿ, ವಾಣಿಜ್ಯ ವಿಭಾಗದಲ್ಲಿ ಬಿಸಿನೆಸ್‌ ಸ್ಟಡೀಸ್‌, ಅಕೌಂಟೆನ್ಸಿ, ಸ್ಟಾಟಿಸ್ಟಿಕ್ಸ್‌ ಮತ್ತು ಕಂಪ್ಯೂಟರ್‌ ಸೈನ್ಸ್‌ ಸಂಯೋಜನೆಯಿದೆ.

ದಾಖಲಾತಿ ಬಯಸುವ ವಿದ್ಯಾರ್ಥಿಗಳು 10ನೇ ತರಗತಿಯ ಸಿಬಿಎಸ್‌ಇ /ಐಸಿಎಸ್‌ಇ ಬೋರ್ಡ್‌ ನಲ್ಲಿ ಶೇ. 90ಕ್ಕಿಂತ ಅಧಿಕ ಹಾಗೂ ರಾಜ್ಯ ಪಠ್ಯಕ್ರಮದಲ್ಲಿ ಶೇ. 95ಕ್ಕಿಂತ ಅಧಿಕ ಅಂಕ ಗಳಿಸಿದ್ದರೆ ಈ ಉಚಿತ ಶಿಕ್ಷಣದ ಸದುಪಯೋಗ ಪಡಿಸಿಕೊಳ್ಳಬಹುದು.

ಕುಂದಾಪುರ, ಮೂಲ್ಕಿ, ಪೆರ್ಡೂರು ಕಡೆಯಿಂದ ಬರುವ ವಿದ್ಯಾರ್ಥಿಗಳಿಗೆ ಕಾಲೇಜು ಬಸ್‌ನ ವ್ಯವಸ್ಥೆಯಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next