Advertisement

ಮಣಿಪಾಲ: ಗಾಂಜಾ ಪ್ರಕರಣದಲ್ಲಿ ಓರ್ವನ ಬಂಧನ

04:34 PM Dec 28, 2022 | Team Udayavani |

ಉಡುಪಿ: ಖಚಿತ ಮಾಹಿತಿ ಮೇಲೆ ಮಣಿಪಾಲ ಪೊಲೀಸರು ಮಣಿಪಾಲದ ಆರ್.ಎಸ್.ಬಿ ಭವನದ ಬಳಿ ದಾಳಿ ಮಾಡಿ 41 ಗ್ರಾಂ ಗಾಂಜಾ, 1.3 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.

Advertisement

ಉಡುಪಿ ಸರಳಬೆಟ್ಟು ನಿವಾಸಿ 32 ವರ್ಷದ ಇಕ್ಬಾಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಶದಲ್ಲಿದ್ದ 2 ಮೊಬೈಲ್ ಮತ್ತು ಸ್ಕೂಟರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು,  ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನು ಕೆಲವು ವ್ಯಕ್ತಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮಾಡಲು ಬಾಕಿ ಇರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next