Advertisement

Manipal ಚೂರಿ ಇರಿತ: ನಾಲ್ವರ ಬಂಧನ

11:04 PM Oct 02, 2023 | Team Udayavani |

ಮಣಿಪಾಲ: ಬ್ರಹ್ಮಾವರ ಮೂಲದ ಯುವಕನಿಗೆ ತಂಡವೊಂದು ಚೂರಿ ಇರಿದ ಘಟನೆ ರವಿವಾರ ತಡರಾತ್ರಿ ಮಣಿಪಾಲದಲ್ಲಿ ನಡೆದಿದೆ.

Advertisement

ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟಾ³ಡಿ, ರಾಹುಲ್‌ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ ಬಂಧಿತರು.

ಬ್ರಹ್ಮಾವರದ ನಿವಾಸಿ ಪ್ರತಾಪ್‌ ಅವರು ಗೆಳೆಯರಾದ ತಿಲಕ್‌ ಮತ್ತು ಹರ್ಷಿತ್‌ ಅವರೊಂದಿಗೆ ಮಣಿಪಾಲದಲ್ಲಿ ರಾತ್ರಿ ತಿರುಗಾಡಲು ಹೋಗಿದ್ದಾಗ ಘಟನೆ ನಡೆದಿದೆ ಎಂದು ಮಣಿಪಾಲ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಪ್ರತಿದೂರು
ಅದೇ ರೀತಿ ಉದಾಫ್ , ತನ್ನ ಮೇಲೆ ಪ್ರತಾಪ್‌ ಮತ್ತವರ ತಂಡ ಕೈ ಹಾಗೂ ನಮಗೆ ಕಲ್ಲಿನಿಂದ ಹಲ್ಲೆ ನಡೆಸಿದೆ ಎಂದು ಪ್ರತಿದೂರು ನೀಡಿದ್ದಾರೆ. ಅದರಂತೆ ಈ ಎರಡೂ ಪ್ರಕರಣಗಳು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next