Advertisement

ಹಿಂಸಾಚಾರ: ಪ್ರಧಾನಿ, ಶಾ ಭೇಟಿಯಾದ ಮಣಿಪುರ ಸಿಎಂ ಬಿರೇನ್ ಸಿಂಗ್

06:38 PM May 14, 2023 | Team Udayavani |

ಹೊಸದಿಲ್ಲಿ: ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಮತ್ತು ಅವರ ಸಂಪುಟದ ನಾಲ್ವರು ಸದಸ್ಯರು ಭಾನುವಾರ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಕಳೆದ ಹಲವು ದಿನಗಳಿಂದ ಹಿಂಸಾಚಾರದಿಂದ ತತ್ತರಿಸಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯನ್ನು ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. .

Advertisement

ರಾಜ್ಯದ ಉಗ್ರಗಾಮಿ ಸಂಘಟನೆಗಳೊಂದಿಗೆ ನಡೆಯುತ್ತಿರುವ ಕಾರ್ಯಾಚರಣೆಯ ಅಮಾನತು (ಎಸ್‌ಒಒ) ವಿಷಯವೂ ಚರ್ಚೆಯಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ನಾಲ್ವರು ಕ್ಯಾಬಿನೆಟ್ ಮಂತ್ರಿಗಳಾದ ಟಿ ಬಿಸ್ವಜಿತ್, ವೈ ಖೇಮಚಂದ್, ಕೆ ಗೋವಿಂದಸ್ ,ಟಿ ಪ್ರಶಾಂತ ಮತ್ತು ಬಿಜೆಪಿ ರಾಜ್ಯಾಧ್ಯಕ್ಷೆ ಶಾರದಾದೇವಿ ಅವರು ಮುಖ್ಯಮಂತ್ರಿ ಸಿಂಗ್ ಜತೆಗಿದ್ದರು.

ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಬೇಡಿಕೆ ಮುಂದಿಟ್ಟು ಪ್ರತಿಭಟಿಸಲು ಮೇ 3 ರಂದು 10 ಗುಡ್ಡಗಾಡು ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಈಶಾನ್ಯ ರಾಜ್ಯದಲ್ಲಿ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿದ್ದವು. ಮೀಸಲು ಅರಣ್ಯ ಭೂಮಿಯಿಂದ ಕುಕಿ ಗ್ರಾಮಸ್ಥರನ್ನು ಹೊರಹಾಕುವ ಬಗ್ಗೆ ಉದ್ವಿಗ್ನತೆಯಿಂದ ಘರ್ಷಣೆಗಳು ಸಂಭವಿಸಿದ್ದವು.

ಕಳೆದ ಕೆಲವು ದಿನಗಳಿಂದ ಈಶಾನ್ಯ ರಾಜ್ಯವನ್ನು ಬೆಚ್ಚಿಬೀಳಿಸಿದ ಜನಾಂಗೀಯ ಹಿಂಸಾಚಾರದಲ್ಲಿ 60 ಜನರು ಸಾವನ್ನಪ್ಪಿದ್ದಾರೆ, 231 ಮಂದಿ ಗಾಯಗೊಂಡಿದ್ದಾರೆ. ಧಾರ್ಮಿಕ ಸ್ಥಳಗಳು ಸೇರಿದಂತೆ 1,700 ಮನೆಗಳನ್ನು ಸುಟ್ಟುಹಾಕಲಾಗಿದೆ ಎಂದು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಸೋಮವಾರ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next