Advertisement

Manipur ಹಿಂಸೆ: ಯುಕೆ ವಿವಿ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್‌

01:02 AM Jul 01, 2024 | Team Udayavani |

ಇಂಫಾಲ: ಮಣಿಪುರದಲ್ಲಿ ಹಿಂಸಾತ್ಮಕ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ ಆರೋಪದ ಹಿನ್ನೆಲೆಯಲ್ಲಿ ಯು.ಕೆ.ಯ ಬರ್ಮಿಂಗ್‌ಹ್ಯಾಂ ವಿವಿಯಲ್ಲಿರುವ ಭಾರತ ಮೂಲದ ಪ್ರಾಧ್ಯಾಪಕ ಉದಯ ರೆಡ್ಡಿ ವಿರುದ್ಧ ಕೇಸು ದಾಖಲಿಸಲಾಗಿದೆ. ಜತೆಗೆ ಅವರ ವಿರುದ್ಧ ಲುಕೌಟ್‌ ನೋಟಿಸ್‌ ಕೂಡ ಹೊರಡಿಸ ಲಾಗಿದೆ. ರೆಡ್ಡಿ, ಮಣಿಪುರದ ಜನರನ್ನು ಧರ್ಮದ ಆಧಾರದಲ್ಲಿ ವಿಭಜಿಸಿ ಹಿಂಸೆಗೆ ಇಳಿಯುವಂತೆ ಜಾಲತಾಣಗಳಲ್ಲಿ ಪ್ರಚೋದನೆ ನಡೆಸುತ್ತಿದ್ದರು ಎಂದು ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ. ವಿಶೇಷವಾಗಿ ಮೈತೇಯಿ ಸಮುದಾಯ ಹೊಂದಿರುವ ಧಾರ್ಮಿಕ ನಂಬಿಕೆಗಳನ್ನು ಟೀಕಿಸಿದ್ದಾರೆ ಎಂದು ದೂರಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next