Advertisement

ದೆಹಲಿ ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

09:50 PM Apr 25, 2023 | Team Udayavani |

ನವದೆಹಲಿ: ಅಬಕಾರಿ ನೀತಿ ಹಗರಣ ಆರೋಪದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ನಾಲ್ವರ ವಿರುದ್ಧ ಸಿಬಿಐ ಅಧಿಕಾರಿಗಳು ಮಂಗಳವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

Advertisement

ಹೈದರಾಬಾದ್ ಮೂಲದ ಸಿಎ ಬುಚ್ಚಿ ಬಾಬು ಗೋರಂಟ್ಲಾ, ಅರ್ಜುನ್ ಪಾಂಡೆ ಮತ್ತು ಅಮನ್‌ ದೀಪ್‌ ಸಿಂಗ್‌ ಧಲ್‌ ಅವರನ್ನು ಐಪಿಸಿ ಸೆಕ್ಷನ್ 120-ಬಿ (ಅಪರಾಧ ಪಿತೂರಿ), 201 ಮತ್ತು 420 ರ ಅಡಿಯಲ್ಲಿ ಪೂರಕ ಆರೋಪ ಪಟ್ಟಿಯಲ್ಲಿ ಸಿಬಿಐ ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಜೊತೆಗೆ ಹೆಸರಿಸಿದೆ.

ಮೊದಲ ಬಾರಿ ಸಿಬಿಐ ಆರೋಪಪಟ್ಟಿಯಲ್ಲಿ ಸಿಸೋಡಿಯಾ ಹೆಸರು ಬಂದಿದ್ದು ಈ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಎರಡನೇ ಆರೋಪಪಟ್ಟಿಯಾಗಿದೆ ಇದು. ಕಳೆದ ವರ್ಷ ನ. 25 ರಂದು ಸಿಬಿಐ ಮೊದಲ ಆರೋಪಪಟ್ಟಿ ಸಲ್ಲಿಸಿತ್ತು.

ಕಳೆದ ವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಸುಮಾರು ಒಂಬತ್ತು ಗಂಟೆಗಳ ಕಾಲ ಪ್ರಕರಣದ ಸಾಕ್ಷಿಯಾಗಿ ಪ್ರಶ್ನಿಸಿತ್ತು. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ,ಬಿಆರ್‌ಎಸ್ ನಾಯಕಿ ಕವಿತಾ ಅವರನ್ನೂ ಈ ಪ್ರಕರಣದಲ್ಲಿ ಪ್ರಶ್ನಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next