Advertisement

ರೊಹಿಂಗ್ಯಾಗಳಿಗೆ ಫ್ಲ್ಯಾಟ್‌:ಅನುಮತಿ ಕೊಟ್ಟದ್ದು ಯಾರು?; ದೆಹಲಿ ಡಿಸಿಎಂ ಸಿಸೋಡಿಯಾ

07:08 PM Aug 18, 2022 | Team Udayavani |

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ರೊಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್‌ ನೀಡುವ ಬಗ್ಗೆ ನಿರ್ಧಾರ ಮಾಡಿದ್ದು ಯಾರು ಎಂಬ ಬಗ್ಗೆ ತನಿಖೆಯಾಗಬೇಕು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಒತ್ತಾಯಿಸಿದ್ದಾರೆ.

Advertisement

ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿರುವ ಅವರು, “ರೊಹಿಂಗ್ಯಾ ಮುಸ್ಲಿಮರಿಗೆ ಫ್ಲ್ಯಾಟ್‌ ನೀಡುವ ಬಗ್ಗೆ ಆಮ್‌ ಆದ್ಮಿ ಪಕ್ಷದ ಸರ್ಕಾರ ನಿರ್ಧಾರ ಮಾಡಿಲ್ಲ. ಕೇಂದ್ರ ಸರ್ಕಾರವೂ ನಿರ್ಧಾರ ಮಾಡಿಲ್ಲ ಎಂದಾದರೆ ಬೇರೆ ಯಾರು ನಿರ್ಧರಿಸಲು ಸಾಧ್ಯ? ಮಾಧ್ಯಮಗಳಲ್ಲಿ ನಿರಾಶ್ರಿತರಿಗೆ ವಾಸ್ತವ್ಯಕ್ಕೆ ಫ್ಲ್ಯಾಟ್‌ಗಳನ್ನು ನೀಡಲಾಗುತ್ತಿದೆ ಎಂಬ ವರದಿಯನ್ನು ನೋಡಿಯೇ ವಿಚಾರ ಗೊತ್ತಾಯಿತು’ ಎಂದು ಅವರು ಬರೆದಿದ್ದಾರೆ.

ವಿವರಗಳನ್ನು ಕೇಳಿದಾಗ ಕೇಂದ್ರ ಸರ್ಕಾರವೇ ಅದಕ್ಕೆ ಸಮ್ಮತಿ ಸೂಚಿಸಿ, ಮುಖ್ಯ ಕಾರ್ಯದರ್ಶಿ ಮೂಲಕ ಲೆಫ್ಟಿನೆಂಟ್‌ ಗವರ್ನರ್‌ಗೆ ಕಳುಹಿಸಲಾಗಿದೆ. ದೆಹಲಿಯ ಚುನಾಯಿತ ಸರ್ಕಾರಕ್ಕೆ ಮಾಹಿತಿ ನೀಡದೇ ಇದ್ದಿದ್ದೇಕೆ ಎಂದೂ ಆಕ್ಷೇಪಿಸಿದ್ದಾರೆ.

ಬಿಜೆಪಿ ತಿರುಗೇಟು:

ವಿವಾದದ ಬಗ್ಗೆ ತಿರುಗೇಟು ನೀಡಿರುವ ದೆಹಲಿ ಬಿಜೆಪಿ ಘಟಕದ ಆದೇಶ್‌ ಗುಪ್ತಾ, ಕೇಜ್ರಿವಾಲ್‌ ಸರ್ಕಾರವೇ ರೊಹಿಂಗ್ಯಾಗಳಿಗೆ ಆಶ್ರಯ ನೀಡುವ ಬಗ್ಗೆ ಪತ್ರ ಬರೆದಿತ್ತು ಎಂದು ದೂರಿದ್ದಾರೆ. ಕೇಜ್ರಿವಾಲ್‌ ಸರ್ಕಾರದ ಪಾಕಿಸ್ತಾನದಿಂದ ಆಗಮಿಸಿದ ಹಿಂದೂಗಳಿಗೆ ವಿದ್ಯುತ್‌ ಸೇರಿದಂತೆ ಮೂಲ ಸೌಕರ್ಯ ನೀಡಲು  ನಿರಾಕರಿಸಿತ್ತು. ಇದೀಗ ಅಕ್ರಮ ಪ್ರವೇಶಿಗಳಿಗೆ ನೆರವು ನೀಡಲು ಮುಂದಾಗಿದೆ ಎಂದಿದ್ದಾರೆ.

Advertisement

ತರೂರ್‌ ಟೀಕೆ:

ಈ ವಿಚಾರ ಸಂಬಂಧ ತಿರುವನಂತಪುರ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ವಿಶ್ವಸಂಸ್ಥೆಯ ನಿರಾಶ್ರಿತರ ಆಯುಕ್ತರ ಕಾರ್ಯಕಾರಿ ಸಮಿತಿಯಲ್ಲಿ ಕೆಲಸ ಮಾಡಿದ ರಾಷ್ಟ್ರಕ್ಕೆ ಇಂಥ ಒಂದು ಬೆಳವಣಿಗೆ ಅವಮಾನ ಎಂದು ಹೇಳಿದ್ದಾರೆ. ದೇಶಕ್ಕೆ ಒಂದು ಹೆಮ್ಮೆಯ ಮಾನವೀಯತೆಯ ಇತಿಹಾಸ ಇದೆ. ಅದಕ್ಕೆ ಕೇಂದ್ರ ಸರ್ಕಾರ ಚ್ಯುತಿ ತರುವ ಕೆಲಸ ಮಾಡುವುದು ಬೇಡ ಎಂದು ಹೇಳಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next