Advertisement

ಅಗ್ನಿಪಥ ವಿರೋಧಿ ಪತ್ರಕ್ಕೆ ಸಹಿ ಹಾಕಲೊಪ್ಪದ ಕಾಂಗ್ರೆಸ್‌ ಸಂಸದ ಮನೀಶ್‌ ತಿವಾರಿ

10:53 PM Jul 11, 2022 | Team Udayavani |

ನವದೆಹಲಿ: ಭಾರತೀಯ ಸೇನೆಯ ಅಗ್ನಿಪಥ ಯೋಜನೆಯನ್ನು ಖಂಡಿಸಿರುವ ಕಾಂಗ್ರೆಸ್‌ ನಿಲುವಿನ ಬಗ್ಗೆ ಸೋಮವಾರ ಅವರದ್ದೇ ಪಕ್ಷದ ಹಿರಿಯ ನಾಯಕರೊಬ್ಬರು ವಿರೋಧ ವ್ಯಕ್ತಪಡಿಸಿದ್ದಾರೆ.

Advertisement

ರಕ್ಷಣಾ ಸಚಿವ ರಾಜನಾಥ ಸಿಂಗ್‌ ನೇತೃತ್ವದ ರಕ್ಷಣಾ ಸಮಿತಿ ಸೋಮವಾರ ಸಭೆ ನಡೆಸಿದೆ. ಸಮಿತಿಯಲ್ಲಿರುವ ವಿರೋಧ ಪಕ್ಷಗಳ ಸಂಸದರು ಅಗ್ನಿಪಥ ವಿರೋಧಿ ಪತ್ರ ಸಿದ್ಧಪಡಿಸಿ, ಸಹಿ ಹಾಕಿ ಸಚಿವರಿಗೆ ಸಲ್ಲಿಸಿವೆ.

ಆದರೆ ಈ ಪತ್ರಕ್ಕೆ ಸಹಿ ಹಾಕುವುದಕ್ಕೆ ಕಾಂಗ್ರೆಸ್‌ ಸಂಸದ ಮನೀಶ್‌ ತಿವಾರಿ ಒಪ್ಪಿಲ್ಲ.

“ಸುಖಾಸುಮ್ಮನೆ ಎಲ್ಲ ವಿಚಾರದಲ್ಲೂ ರಾಜಕೀಯ ಮಾಡುವುದು ತಮಾಷೆಯೆನಿಸುತ್ತದೆ’ ಎಂದು ಅವರು ಹೇಳಿದ್ದಾರೆ. ಸಮಿತಿಯಲ್ಲಿರುವ 20 ಸದಸ್ಯರ ಪೈಕಿ ಕೇವಲ 6 ಸದಸ್ಯರು ಪತ್ರಕ್ಕೆ ಸಹಿ ಹಾಕಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next